Advertisement

Lokayukta: ಕವಾಡಿಗರಹಟ್ಟಿಗೆ ಲೋಕಾಯುಕ್ತ ನ್ಯಾ| ಪಾಟೀಲ್‌ ಭೇಟಿ

11:06 PM Aug 11, 2023 | Team Udayavani |

ಚಿತ್ರದುರ್ಗ: ರಾಜ್ಯ ಲೋಕಾಯುಕ್ತ ನ್ಯಾ| ಬಿ.ಎಸ್‌. ಪಾಟೀಲ್‌ ಅವರು ಕಲುಷಿತ ನೀರು ಸೇವಿಸಿ ಕೆಲವರು ಮೃತಪಟ್ಟ ನಗರದ ಕವಾಡಿಗರಹಟ್ಟಿಗೆ ಶುಕ್ರವಾರ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.

Advertisement

ಕವಾಡಿಗರಹಟ್ಟಿಗೆ ನೀರು ಪೂರೈ ಸುವ ಓವರ್‌ ಹೆಡ್‌ ಟ್ಯಾಂಕ್‌ ಬಳಿಗೆ ತೆರಳಿ ಪರಿಶೀಲಿಸಿದರು. ಅನಂತರ ಅಂಗನವಾಡಿಯಲ್ಲಿ ತಾತ್ಕಾಲಿಕವಾಗಿ ತೆರೆದಿರುವ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದರು. ಲೋಕಾಯುಕ್ತರ ಭೇಟಿ ವೇಳೆ ಇಬ್ಬರು ಶುಶ್ರೂಷಕರು ಮಾತ್ರ ಕರ್ತವ್ಯದಲ್ಲಿದ್ದರು. ವೈದ್ಯರು ಹಾಜರಿರಲಿಲ್ಲ. ಇದಕ್ಕೆ ಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದರು.

ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಮಹಿಳೆ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮನೆಯಲ್ಲಿ ಶೌಚಾಲಯ ಇಲ್ಲದ್ದನ್ನು ಗಮನಿಸಿದ ಲೋಕಾಯುಕ್ತರು, ಸರಕಾರದ ಯೋಜನೆಯಡಿ ಈ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿ ಕೊಡಲು ಕೂಡಲೇ ಕ್ರಮ ವಹಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು.

ವೈದ್ಯರ ಕಾರ್ಯಕ್ಕೆ ಮೆಚ್ಚುಗೆ
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಪ್ರಕರಣದಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸೆಗಾಗಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆದು, ಅಗತ್ಯ ಔಷಧ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪೌರಾಯುಕ್ತರಿಗೆ ತರಾಟೆ
ಬೆಳಗ್ಗೆ 7.30ಕ್ಕೆ ನಗರಕ್ಕೆ ಆಗಮಿಸಿ ಮೆದೇಹಳ್ಳಿ ರಸ್ತೆ, ಬಿ.ಡಿ. ರಸ್ತೆ, ಜೆಸಿಆರ್‌, ಹೊರಪೇಟೆ, ರಾಷ್ಟ್ರೀಯ ಹೆದ್ದಾರಿ ಸರ್ವಿಸ್‌ ರಸ್ತೆಗಳಲ್ಲಿ ಲೋಕಾಯುಕ್ತರು ಸಂಚಾರ ನಡೆಸಿದರು. ಈ ವೇಳೆ ರಸ್ತೆ ಬದಿ ಎಲ್ಲೆಂದರಲ್ಲಿ ಕಸ ಬಿದ್ದಿರುವುದು, ಖಾಲಿ ನಿವೇಶನದಲ್ಲಿ ಕಸದ ರಾಶಿ ಕಂಡು ನಗರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

Advertisement
Advertisement

Udayavani is now on Telegram. Click here to join our channel and stay updated with the latest news.

Next