Advertisement

ಲೋಕಾಯುಕ್ತರು ಆಸ್ಪತ್ರೆಯಿಂದ ಬಿಡುಗಡೆ

06:10 AM Mar 15, 2018 | Team Udayavani |

ಬೆಂಗಳೂರು : ಚಾಕುವಿನಿಂದ ಇರಿತಕ್ಕೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿಯವರು ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಬುಧವಾರ ಬಿಡುಗಡೆಯಾದರು.

Advertisement

ಮಲ್ಯ ಆಸ್ಪತ್ರೆಯಿಂದ ಬಿಡುಗಡೆಯಗುವ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ಚಿಕಿತ್ಸೆ ಪಡೆಯುವ ವೇಳೆ ಆಸ್ಪತ್ರೆಯಲ್ಲಿ ಪ್ರತಿಯೊಬ್ಬರೂ ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ, ಅವರೆಲ್ಲರಿಗೂ ಕೃತಜ್ಞತೆ ತಿಳಿಸಲು ಬಯಸುತ್ತೇನೆ . ನನ್ನ ಆರೋಗ್ಯದ ಬಗ್ಗೆ ಪ್ರಾರ್ಥನೆ ಮಾಡಿದವರೆಲ್ಲರಿಗೂ ಧನ್ಯವಾದಗಳನ್ನು ಹೇಳುತ್ತೇನೆಂದು ವಿಶ್ವನಾಥ ಶೆಟ್ಟರು ತಿಳಿಸಿದರು.

ಮಾ.3 ರಂದು ಲೋಕಾಯುಕ್ತ ಕಚೇರಿಯಲ್ಲಿ ಆರೋಪಿ ತೇಜರಾಜ್‌ ಶರ್ಮಾ, ನ್ಯಾಯಮೂರ್ತಿ ವಿಶ್ವನಾಥ ಶೆಟ್ಟರ ಚೇಂಬರ್‌ಗೆ  ತೆರಳಿ ಚಾಕುವಿನಿಂದ ಇರಿದು ತೀವ್ರವಾಗಿ ಗಾಯಗೊಳಿಸಿದ್ದನು. ತಕ್ಷಣವೇ ಲೋಕಾಯುಕ್ತರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು. 12 ದಿನಗಳ ಕಾಲ ಚಿಕಿತ್ಸೆ ಪಡೆದು ವಿಶ್ವನಾಥ ಶೆಟ್ಟರು ಮನೆಗೆ ಮರಳಿದ್ದಾರೆ.ಕೈಗೆ ಬ್ಯಾಂಡೇಜ್‌ ಹಾಕಲಾಗಿದ್ದು , ಹೊಲಿಗೆಯನ್ನು ಬಿಚ್ಚಲಾಗಿದೆ. ಮನೆಯಲ್ಲಿ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದು 15 ದಿನಗಳಲ್ಲಿ ಚಾಕುವಿನ ಇರಿತದಿಂದ ಆಗಿರುವ ಗಾಯ ಸಂಪೂರ್ಣವಾಗಿ ಮಾಯಲಿದೆ ಎಂದು ನ್ಯಾ.ವಿಶ್ವನಾಥ ಶೆಟ್ಟಿಯವರ ಕುಟುಂದವರು ” ಉದಯವಾಣಿಗೆ ‘ ತಿಳಿಸಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಂದರ್ಭದಲ್ಲಿ ಲೋಕಾಯುಕ್ತರು ಚಾಕು ಇರಿತದ ಘಟನೆ ಬಗ್ಗೆ ಮಾತನಾಡಲು ನಿರಾಕರಿಸಿದರು. ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ ಪಾಟೀಲ್‌ ಆಸ್ಪತ್ರೆಯಲ್ಲಿ ಲೋಕಾಯುಕ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹಲವು ಸ್ನೇಹಿತರು, ನ್ಯಾಯಾಧೀಶರು, ಆಪ್ತರು ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next