Advertisement

Lokayukta Raid;ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

08:59 AM Jun 28, 2023 | Team Udayavani |

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನವರಾದ ರಾಯಚೂರು ನಗರ ಅಭಿವೃದ್ಧಿ ಕೋಶದ ಯೋಜನಾ ಶಾಖೆಯ ಸಹಾಯಕ ನಿರ್ದೇಶಕ ಶರಣಪ್ಪ ಮಡಿವಾಳರ್ ಅವರ ಮಾಲೀಕತ್ವದ ಫಾರ್ಮ ಹೌಸ್ ಹಾಗೂ ಮನೆಗಳ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Advertisement

ನಗರದ ನಾಗನಹಳ್ಳಿ ಖಣದಾಳ ರಸ್ತೆಯಲ್ಲಿರುವ ಫಾರ್ಮ್ ಹೌಸ್ ಮತ್ತು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿರುವ ಕಚೇರಿ ಮತ್ತು ಮನೆಯ ಮೇಲೆ ದಾಳಿ ನಡೆದಿದೆ ಎಂದು ಗೊತ್ತಾಗಿದೆ.

ಶರಣಪ್ಪ ಹಲವು ವರ್ಷಗಳಿಂದ ರಾಯಚೂರು ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪ ಅವರ ಮೇಲಿತ್ತು. ಈ ನಿಟ್ಡಿನಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.

ಕಲಬುರಗಿ ಲೋಕಾಯುಕ್ತ ಎಸ್ಪಿ ಎ.ಆರ್. ಕರ್ನೂಲ್ ನೇತೃತ್ವದಲ್ಲಿ ಪೊಲೀಸರು ಕಲಬುರಗಿಯ ಫಾರ್ಮ್ ಹೌಸ್ ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಹೌಸ್ ನಲ್ಲಿರುವ ಸಿಬ್ಬಂದಿ ಮಾಹಿತಿ ನೀಡುತ್ತಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ನಡೆದಿದೆ.

ರಾಮನಗರದಲ್ಲೂ ಲೋಕಾಯುಕ್ತ ರೇಡ್
ರಾಮನಗರ:  ಕೃಷಿ ಜಂಟಿ‌ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದಾರೆ. ತುಮಕೂರಿನಲ್ಲಿ ಕೃಷಿ ಜಂಟಿ‌ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಕೆ.ಹೆಚ್. ರವಿ. ರಾಮನಗರದ ಶಾಂತಿಲಾಲ್ ಲೇಔಟ್ ನಲ್ಲಿ‌ ಸ್ವಂತ ಮನೆ ಹೊಂದಿರುವ ಅಧಿಕಾರಿ. ಅಕ್ರಮ‌ ಹಣ, ಆಸ್ತಿ ಗಳಿಕೆ‌ ಮಾಡಿರುವ ಹಿನ್ನೆಲೆ‌ ಲೋಕಾಯುಕ್ತ ದಾಳಿ ನಡೆಸಿದ್ದಾರೆ .ಬೆಳಗ್ಗೆಯಿಂದ ಮನೆಯಲ್ಲಿ ಆಸ್ತಿ ಪತ್ರ, ಇತರೆ ದಾಖಲಾತಿಗಳನ್ನು  ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next