Advertisement

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

02:30 PM Jul 24, 2024 | Team Udayavani |

ಹಾವೇರಿ: ಲಂಚ ಪಡೆಯುವಾಗ ಉಪ ತಹಸೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿರುವ ನಾಡಕಚೇರಿಯಲ್ಲಿ ರೆಡ್ ಹ್ಯಾಂಡ್ ಆಗಿ ಉಪ  ತಹಶೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

Advertisement

ಸೋಮಪ್ಪ ನಾಯ್ಕರ್  ರೈತರಿಗೆ ದಾಖಲೆ ಪತ್ರಗಳನ್ನ ಕೊಡುವುದಕ್ಕೆ ಐದು ಸಾವಿರ ಡಿಮ್ಯಾಂಡ್ ಮಾಡಿದ್ದರು. ಬುಧವಾರ (ಜು.24ರಂದು) ಮುಂಗಡವಾಗಿ ಎರಡು ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸೋಮಪ್ಪ ನಾಯ್ಕರ್  ಅವರ ಹಾವೇರಿಯ ನಿವಾಸದ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ಪ್ರತಿಯೊಂದು ಪೈಲ್ ಮೂಮೆಂಟ್ ಗೂ ಸೋಮಪ್ಪ ಹಣ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.

ಖಚಿತ ಮಾಹಿತಿಯ ಮೇರೆಗೆ ದೂರು ಬಂದ ಹಿನ್ನೆಲೆ ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next