Advertisement

ವಿಜಯಪುರ ಜಿಲ್ಲೆಯ ಇಬ್ಬರು ಅಧಿಕಾರಿಗಳ ಮನೆ, ಕಛೇರಿ ಮೇಲೆ ಲೋಕಾಯುಕ್ತ ದಾಳಿ

12:06 PM Jun 28, 2023 | Team Udayavani |

ವಿಜಯಪುರ: ಬುಧವಾರ ನಸುಕಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಜಿಲ್ಲೆಯ ಇಬ್ಬರು ಅಧಿಕಾರಿಗಳ ಮನೆ ಹಾಗೂ ಕಛೇರಿ ಸೇರಿ ನಾಲ್ಕು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಆದಾಯಕ್ಕೆ ಮೀರಿ ಅಕ್ರಮ ಆಸ್ತಿ ಗಳಿಕೆಯ ಕುರಿತು ತನಿಖೆ ನಡೆಸಿದ್ದಾರೆ.

Advertisement

ಬಸವನಬಾಗೇವಾಡಿ ಪ್ರಭಾರಿ ಎಇಇ ಆಗಿರುವ ಜೆಇ ಭೀಮನಗೌಡ ಬಿರಾದಾರ ನಿವಾಸ ಹಾಗೂ ಅವರ ಸಂಬಂಧಿ ಶ್ರೀಕಾಂತ್ ಅಂಗಡಿ ನಿವಾಸದ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ವಿಜಯಪುರ ನಗರದ ಆರ್.ಟಿ.ಓ ಕಚೇರಿ ಹಿಂಭಾಗದಲ್ಲಿರುವ ಭೀಮನಗೌಡ ಬಿರಾದಾರ ನಿವಾಸದ ಮೇಲೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇದಲ್ಲದೇ ಮುದ್ದೇಬಿಹಾಳ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಜೆ.ಪಿ. ಶೆಟ್ಟಿ ನಿವಾಸ ಹಾಗೂ ತಾಳಿಕೋಟೆ ತಾಲೂಕಿನ ಸಾಸನೂರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ವಿಜಯಪುರ ಲೋಕಾಯುಕ್ತ ಎಸ್ಪಿ ಅನಿತಾ ಹದ್ದನ್ನವರ ನೇತೃತ್ವದಲ್ಲಿ ಜಿಲ್ಲೆಯ ಇಬ್ಬರು ಅಧಿಕಾರಿಗಳ ಕಛೇರಿ, ನಿವಾಸ, ಸಂಬಂಧಿಗಳ ನಿವಾಸಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ದಾಖಲೆ ಪರಿಶೀಲನೆ ನಡೆಸಿದ್ದಾರೆ.

Advertisement

ನಾಲ್ಕು ಕಡೆಗಳಲ್ಲಿ 3 ಡಿವೈಎಸ್ಪಿ, 7 ಇನ್ಸಪೆಕ್ಟರ್ ನೇತೃತ್ವದಲ್ಲಿ ಪ್ರತ್ಯೇಕವಾಗಿ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next