Advertisement

ಶಿವಮೊಗ್ಗ: ನಿವೃತ್ತ ಡಿಸಿಎಫ್ ಹಾಗೂ‌ ಹೊಳಲ್ಕೆರೆ ತಹಶೀಲ್ದಾರ್ ಗೆ ಲೋಕಾಯುಕ್ತ ಶಾಕ್

09:45 AM Apr 24, 2023 | keerthan |

ಶಿವಮೊಗ್ಗ: ಇಬ್ಬರು ಅಧಿಕಾರಿಗಳ ಮನೆ ಮೇಲೆ ಸೋಮವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ನಿವೃತ್ತ ಡಿಸಿಎಫ್ ಐ.ಎಂ. ನಾಗರಾಜ್ ಹಾಗೂ‌ ಹೊಳಲ್ಕೆರೆ ತಹಶೀಲ್ದಾರ್ ಎನ್.ಜೆ.ನಾಗರಾಜ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

ನಿವೃತ್ತ ಡಿಸಿಎಫ್ ಐ.ಎಂ ನಾಗರಾಜ್ ರವರ ಶಿವಮೊಗ್ಗ ಮನೆ, ಕಚೇರಿ, ಶಿವಮೊಗ್ಗದ ಗುಡ್ ಲಕ್ ಸರ್ಕಲ್ ಬಳಿ ಇರುವ ಕಾಂಪ್ಲೆಕ್ಸ್, ಶಿವಮೊಗ್ಗ ಹೊರವಲಯದ ಅನುಪಿನಕಟ್ಟೆ ಬಳಿ ಇರುವ ವಿಸ್ಮಯ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ. ಜೊತೆಗೆ ದಾವಣಗೆರೆಯ ಹೊನ್ನಾಳಿ ಬಳಿಯ ತೋಟದ ಮನೆ ಮೇಲೆ ಸಹ ದಾಳಿ ಮಾಡಲಾಗಿದೆ.

ಶಿವಮೊಗ್ಗದ ಶಿಕಾರಿಪುರದಲ್ಲಿರುವ ತಹಶಿಲ್ದಾರ್ ನಾಗರಾಜ್ ಅವರಿಗೆ ಅಧಿಕಾರಿಗಳು ಶಾಕ್ ನೀಡಿದ್ದು, ಇಬ್ಬರು ಅಧಿಕಾರಿಗಳ ನೇತೃತ್ವದ ತಂಡದಿಂದ ಏಳು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಹೊಳಲ್ಕೆರೆ ಪಟ್ಟಣದಲ್ಲಿನ ತಾಲೂಕು ಕಚೇರಿ ಮೇಲೂ ದಾಳಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next