Advertisement

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

01:27 AM Jun 30, 2024 | Team Udayavani |

ಮಂಗಳೂರು: ಮಂಗಳೂರಿನ ಭೂ ಮಾಪನ ಇಲಾಖೆಯ ಅಧಿಕಾರಿ(ಡಿಡಿಎಲ್‌ಆರ್‌) ಮತ್ತು ಇಬ್ಬರು ಸರ್ವೇಯರ್‌ಗಳ ಕಚೇರಿ ಹಾಗೂ ಮನೆಗಳಲ್ಲಿ ಶನಿವಾರ ಮಂಗಳೂರು ಲೋಕಾಯುಕ್ತ ಪೊಲೀಸರು ತಪಾಸಣೆ ನಡೆಸಿದ್ದಾರೆ.

Advertisement

ಮಂಗಳೂರು ಡಿಡಿಎಲ್‌ಆರ್‌ ಕಚೇರಿ ಮತ್ತು ದೇರಳಕಟ್ಟೆ ಬಳಿ ಇರುವ ಉಳ್ಳಾಲದ ಸರ್ವೇಯರ್‌ ಕಚೇರಿಯಲ್ಲಿ ತಪಾಸಣೆ ನಡೆಸಲಾಗಿದೆ. ಅಲ್ಲದೆ ಅಧಿಕಾರಿ ಮತ್ತು ಸರ್ವೇಯರ್‌ಗಳಿಗೆ ಸೇರಿದ ಬಂಟ್ವಾಳ, ಸೋಮೇಶ್ವರ, ಮಂಗಳೂರು ನಗರ ಮತ್ತು ಕಾರ್ಕಳದ ಮನೆಗಳಲ್ಲಿಯೂ ಪರಿಶೀಲನೆ ನಡೆಸಲಾಗಿದೆ.

ಲೋಕಾಯುಕ್ತ ಎಸ್‌ಪಿ ನಟರಾಜ್‌ ಅವರ ನೇತೃತ್ವದಲ್ಲಿ ಒಟ್ಟು 6 ತಂಡಗಳು ಕಾರ್ಯಾಚರಣೆ ನಡೆಸಿದ್ದು, ತನಿಖೆ ಮುಂದುವರೆದಿದೆ. ಇಲಾಖೆಯ ಕಚೇರಿಯಲ್ಲಿ ಲಂಚ ಸ್ವೀಕಾರ ನಡೆಯುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next