Advertisement

Bribe: ಕಡತಗಳಿಗೆ ಹಣ; ಭೂದಾಖಲೆ ಉಪನಿರ್ದೇಶಕ,ಮಧ್ಯವರ್ತಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ

08:09 AM Jul 30, 2024 | Team Udayavani |

ಕಲಬುರಗಿ: ಕಡತಗಳಿಗೆ ಸಿಬ್ಬಂದಿಯಿಂದಲೇ ಹಣ ಪಡೆಯುತ್ತಿದ್ದ ಇಲ್ಲಿನ ಜಿಲ್ಲಾ ಭೂ ದಾಖಲೆಗಳ ಉಪ ನಿರ್ದೇಶಕ ಹಾಗೂ ಓರ್ವ ಮಧ್ಯವರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Advertisement

ಭೂ ದಾಖಲಾತಿಗಳ ಕಡತಗಳಿಗೆ ಸಹಿ ಹಾಕಲು ಜತೆಗೆ ನಗರದ ಬ್ರಹ್ಮಪುರ ಸರ್ವೆ ನಂಬರ್ ವೊಂದರ 25 ಎಕರೆ ಗುಂಟೆ ಜಮೀನಿನ ಪೋಡಿ ಮಾಡಲು 3. 50 ಲಕ್ಷ ರೂ ಬೇಡಿಕೆ ಇಟ್ಟು ಅದರಲ್ಲಿ 1.50 ಲಕ್ಷ ರೂ ಪಡೆಯುತ್ತಿದ್ದ ಜಿಲ್ಲಾ ಭೂ ದಾಖಲೆಗಳ ಮತ್ತು ಸರ್ವೆ ಉಪನಿರ್ದೇಶಕ ಪ್ರವೀಣ ಜಾಧವ್ ಹಾಗೂ ಮಧ್ಯವರ್ತಿ ಶರಣಗೌಡ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಭೂದಾಖಲೆ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳಿಂದಲೇ  ಪ್ರತಿಯೊಂದು ಕಾರ್ಯಕ್ಕೂ ರಾಜಾರೋಷವಾಗಿ ಹಣದ ಬೇಡಿಕೆ ಇಡುತ್ತಿರುವುದು ವ್ಯಾಪಕವಾಗಿ ಕೇಳಿ ಬಂದಿತ್ತು. ಕೊನೆಗೂ ಲೋಕಾಯುಕ್ತ ಪೊಲೀಸ್ ರ ಬಲೆಗೆ ಸಿಕ್ಕಿ ಬಂಧನವಾಗಿದ್ದಾರೆ.

ಇಲಾಖಾ ಸಿಬ್ಬಂದಿಯೇ ದೂರು: ಅಧಿಕಾರಿಗಳ ಭೃಷ್ಟಾಚಾರ ದಿಂದ ಬೇಸತ್ತು ಇಲಾಖಾ ಸಿಬ್ಬಂದಿಯೇ ದೂರು ಸಲ್ಲಿಸಿದ್ದು, ಇಲಾಖೆಯ ಭೂಮಾಪಕ ರೇವಣಸಿದ್ದ ಮೂಲಗೆ ಅವರೇ ರೋಸಿ ಹೋಗಿ ಲೋಕಾಯುಕ್ತ ಪೊಲೀಸ್ ರಿಗೆ ದೂರು ಸಲ್ಲಿಸಿದ್ದಾರೆ.

ಸಿಬ್ಬಂದಿಗಳಿಗೆನೀವು ಏನಾದರೂ ತಪ್ಪು ಮಾಡಿದರೆ ಸಣ್ಣಪುಟ್ಟ ವಿಷಯದಲ್ಲಿ ನಿಮಗೆ ಅಮಾನತು ಮಾಡುತ್ತೇನೆ ಅಂತ ಹೇಳಿ ಮಾನಸಿಕ ಹಿಂಸೆ ನೀಡುತ್ತಿದ್ದ. ಪ್ರತಿಯೊಂದು ಕಡೆತಕ್ಕೆ ಹಣ ಕೊಡಬೇಕೆಂದು ಹೇಳುತ್ತಿದ್ದ  ಡಿಡಿಎಲ್ ಆರ್ ಜಾಧವ್ ಕೊನೆಗೂ ಪ್ರಕರಣವೊಂದರಲ್ಲಿ ಮೂರುವರೆ ಲಕ್ಷ ರೂ. ಬೇಡಿಕೆಯಿಟ್ಟು 1.50 ಲಕ್ಷ ರೂ ಪಡೆಯುತ್ತಿದ್ದಾಗ ಖೆಡ್ಡಾ ತೊಡಲಾಗಿದೆ.

Advertisement

ಲೋಕಾಯುಕ್ತ ಎಸ್ ಪಿ ಜಾನ ಆಂಟೋನಿ ಮಾರ್ಗದರ್ಶನ ದಲ್ಲಿ ಡಿಎಸ್ಪಿ ಗೀತಾ ಬೇನಾಳ, ಮಂಜುನಾಥ, ಇನ್ಸಪೆಕ್ಟರ್ ರಾಜಶೇಖರ ಹಳಗೋಧಿ ಸೋಮವಾರ ಮಧ್ಯಾಹ್ನ ದಾಳಿ ನಡೆಸಿ‌ ಮಧ್ಯರಾತ್ರಿವರೆಗೂ ಪಂಚನಾಮೆ ನಡೆಸಿದ್ದು, ತನಿಖಾ ಕಾರ್ಯ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next