Advertisement

ಪಿಡಿಒ ವಿರುದ್ಧ ಕ್ರಮಕ್ಕೆ ಲೋಕಾಗೆ ಆಗ್ರಹ

03:05 PM Jul 19, 2019 | Team Udayavani |

ರೋಣ: ತಾಲೂಕಿನ ಮಾಡಲಗೇರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ರೈತರ ನಿರ್ಮಾಣ ಮಾಡಿಕೊಂಡರೂ ಕೃಷಿ ಹೊಂಡಗಳ ಬಿಲ್ ಪಾವತಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಜರುಗಿಸಿ ನ್ಯಾಯ ಒದಗಿಸಿ ಕೊಡಬೇಕು ಒತ್ತಾಯಿಸಿ ರೈತ ಶಂಕರಗೌಡ.ಬ.ಅಮಾತಿಗೌಡ್ರ ಲೋಕಾಯುಕ್ತರಿಗೆ ಮನವಿ ಸಲ್ಲಿಸಿದರು.

Advertisement

ತಾಲೂಕು ಪಂಚಾಯತಿ ಸಭಾಭವನದಲ್ಲಿ ಸಾರ್ವಜನಿಕರ ದೂರು ಸ್ವೀಕರಿಸಲು ಬಂದಿದ್ದ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ಬಳಿಕ ಮಾತನಾಡಿದ ಅವರು, ಕಳೆದ 15 ದಿನಗಳ ಹಿಂದೆ ನಾವು ಕೃಷಿಹೊಂಡವನ್ನು ನಿರ್ಮಿಸಿಕೊಂಡಿದ್ದೇವೆ. ಆದರೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಂಪ್ಯೂಟರ್‌ ಆಪರೇಟರ್‌ ಸೇರಿಕೊಂಡು ಇಲ್ಲಿಯವರೆಗೆ ಹಾಜರಿ ತುಂಬಿಕೊಂಡು ಬಿಲ್ ಮಾಡಲು ಮುಂದಾಗಿಲ್ಲ. ಆದ್ದರಿಂದ ತಾವುಗಳ ಈ ಬಿಲ್ ಮಾಡಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು.

ಲೋಕಾಯುಕ್ತ ಸಿಪಿಐ ರವಿ ಪುರುಷೋತ್ತಮ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆಯುವ ಮೂಲಕ ಸಮಸ್ಯೆಗೆ ಪರಿಹಾರ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next