Advertisement

ಏಕೀಕರಣಕ್ಕಾಗಿ ದುಡಿದವರನ್ನು ಸ್ಮರಿಸಿ : ಲೋಕೇಶ್‌ ಸಾಗರ್‌ ಕರೆ

04:22 PM Mar 13, 2017 | Team Udayavani |

ಮಡಿಕೇರಿ: ವಾಸ್ತವ ಚಿತ್ರಣಗಳನ್ನು ಸಾಹಿತ್ಯದ ಮೂಲಕ ಪ್ರತಿಬಿಂಬಿಸಿದಾಗ ಸಾಮಾಜಿಕ ಬದಲಾವಣೆಗಳು ಸಾಧ್ಯವೆಂದು ಅಭಿ ಪ್ರಾಯಪಟ್ಟಿರುವ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷರಾದ ಬಿ.ಎಸ್‌.ಲೋಕೇಶ್‌ ಸಾಗರ್‌ ಕರ್ನಾಟಕದ ಏಕೀಕರಣಕ್ಕಾಗಿ ಹಿರಿಯರು ಮಾಡಿದ ತ್ಯಾಗ ಬಲಿದಾನಗಳನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕೆಂದು ಕರೆ ನೀಡಿದ್ದಾರೆ.

Advertisement

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ನಡೆದ “ಕರ್ನಾಟಕ ಏಕೀಕರಣದ 60ನೇ ವರ್ಷಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಏಕೀಕರಣಗೊಂಡು 60 ವರ್ಷಗಳೇ ಕಳೆದಿದ್ದು, ಹರಿದು ಹಂಚಿ ಹೋಗಿದ್ದ ಪ್ರದೇಶಗಳನ್ನು ಒಗ್ಗೂಡಿ ಸುವಲ್ಲಿ ಕನ್ನಡಿಗರು ಮಾತ್ರವಲ್ಲದೆ ಕನ್ನಡೇತರರ ಕೊಡುಗೆ ಕೂಡ ಅಪಾರ ವಿದೆ ಎಂದರು. ಹಿರಿಯರು ಪರಿಶ್ರಮ ದಿಂದ ಕಟ್ಟಿ ಬೆಳೆಸಿದ ಈ ಕನ್ನಡ ನಾಡನ್ನು ಮತ್ತು ಏಕೀಕರಣವನ್ನು ಮತ್ತಷ್ಟು ಸದೃಢಗೊಳಿಸುವ ಅಗತ್ಯವಿದೆ ಎಂದ ಲೋಕೇಶ್‌ ಸಾಗರ್‌ ಏಕೀಕರಣಕ್ಕಾಗಿ ಹೋರಾಡಿದವರನ್ನು ಸ್ಮರಿಸಿದರು. ರಾಜ್ಯದ ಕೆಲವು ಭಾಗಗಳು ನಮ್ಮದೇ ತಪ್ಪಿನಿಂದ ಕೈತಪ್ಪಿ ಹೋಗುತ್ತಿವೆ. ಇದನ್ನು ಮತ್ತೆ ಪಡೆಯಲು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಅಭಿಮಾನ ಮೂಡಿಸಿಕೊಳ್ಳುವ ಮನೋಭಾವ ಹೆಚ್ಚಾಗಬೇಕೆಂದು ಕರೆ ನೀಡಿದರು.

 ಸಾಹಿತ್ಯದ ಮೂಲಕ ಎಲ್ಲವನ್ನೂ ಸಾಧಿಸಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟ ಲೋಕೇಶ್‌ ಸಾಗರ್‌, ವಾಸ್ತವತೆಯನ್ನು ಪ್ರತಿಬಿಂಬಿಸುವ ಮೂಲಕ ಕನ್ನಡಿಗರನ್ನು ಜಾಗೃತಗೊಳಿಸುವ ಕಾರ್ಯವಾಗಬೇಕೆಂದರು.
 ಮುಖ್ಯ ಭಾಷಣಕಾರರಾಗಿ ಮಾತನಾಡಿದ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷರಾದ ಎಸ್‌.ಐ.ಮುನೀರ್‌ ಅಹಮ್ಮದ್‌, ಕನ್ನಡ ಸಾಹಿತ್ಯದಲ್ಲಿರುವ ಅದ್ಭುತ ಜ್ಞಾನ ಭಂಡಾರವನ್ನು ಯುವ ಸಮೂಹ ಓದಿ ಮನದಟ್ಟು ಮಾಡಿಕೊಳ್ಳುವ ಮೂಲಕ ಕನ್ನಡ ಜ್ಞಾನ‌ವನ್ನು ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು.

 ರಾಜ್ಯದಲ್ಲಿ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಹಣಕ್ಕಾಗಿ ಕಾರ್ಯ ನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಪ್ರತಿಭೆಗೆ ಬೆಲೆ ಇಲ್ಲದಾಗಿದೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ, ಸಮಾಜದ ಉನ್ನತ ಸ್ಥಾನಗಳನ್ನು ಅಲಂಕರಿಸಿದ ಮಂದಿ ನಮ್ಮ ನಡುವೆ ಇದ್ದಾರೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು. ಕನ್ನಡ ನಾಡಿನ ಮೇಲೆ ನೆರೆ ರಾಜ್ಯಗಳ ಆಕ್ರಮಣ ಇಂದು ಹೆಚ್ಚಾಗಿದೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಹುನ್ನಾರವೂ ಪ್ರಬಲವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಮುನೀರ್‌ ಅಹಮ್ಮದ್‌ ಬೇಸರ ವ್ಯಕ್ತಪಡಿಸಿದರು.

Advertisement

ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಸಾಪ ಅಧ್ಯಕ್ಷ  ಕುಡೆಕಲ್‌  ಸಂತೋಷ್‌ ಮಾತನಾಡಿ, ಇಂದಿನ ದಿನದಲ್ಲಿ ಆಂಗ್ಲ ಭಾಷೆಯ   ವ್ಯಾಮೋಹ ದಿಂದ   ಕನ್ನಡವನ್ನು ಹಿಂದೆ ತಳ್ಳುತ್ತಿ ದ್ದೇವೆ. ಇಂತಹ ಪರಿಸ್ಥಿತಿ ನಡುವೆ ಕನ್ನಡ ಸಾಹಿತ್ಯ ಪರಿಷತ್‌ ಕನ್ನಡದ ಬೆಳವಣಿಗೆಗೆ ಪೂರಕವಾದ ಹಲವಾರು ಕಾರ್ಯ ಕ್ರಮ ಗಳನ್ನು ಹಮ್ಮಿಕೊಂಡು ಬರುತ್ತಿ ರುವುದು ಶ್ಲಾಘನೀಯವೆಂದರು.   

ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ   ಚುಮ್ಮಿ ದೇವಯ್ಯ, ಮಹಿಳಾ ಕಾಲೇಜು ಪ್ರಾಂಶುಪಾಲೆ ಡಾ| ಜೆನ್ನಿಫ‌ರ್‌ ಲೋಲಿಟಾ, ಜಿಲ್ಲಾ ಕಸಾಪ ಗೌ. ಕಾರ್ಯದರ್ಶಿ ಕೆ.ಎಸ್‌. ರಮೇಶ್‌, ತಾ. ಕಾರ್ಯದರ್ಶಿ ಕೆ.ಸಿ. ದಯಾನಂದ ಪ್ರಮುಖರಾದ ಹರಿಣಿ ಎಸ್‌.ಡಿ. ಅನಿತಾ ಮತ್ತಿತರರು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next