Advertisement

Loksabha; 28 ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಪ್ರತ್ಯೇಕ ಜವಾಬ್ದಾರಿ ಕೇಳಿದ್ದೇನೆ: ಯತ್ನಾಳ್

12:51 PM Mar 08, 2024 | keerthan |

ವಿಜಯಪುರ: ಬೆಳಗಾವಿಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಲೋಕಸಭೆ ಚುನಾವಣೆ ವಿಷಯವಾಗಿ ನನ್ನ ಜೊತೆ ಪ್ರತ್ಯೇಕವಾಗಿ 15 ನಿಮಿಷಗಳ ಕಾಲ ಮಾತನಾಡಿದ್ದಾರೆ. ರಾಜ್ಯದಾದ್ಯಂತ ಪ್ರತ್ಯೇಕವಾಗಿ ಪ್ರಚಾರ ಮಾಡಲು ಅವಕಾಶ ಕೇಳಿದ್ದೇನೆ ಎಂದು ಬಿಜೆಪಿ ಹಿರಿಯ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

Advertisement

ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ. ಆದರೆ ರಾಜ್ಯದಾದ್ಯಂತ ಸಂಚರಿಸಿ, ಎಲ್ಲಾ 28 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ. ಪ್ರತ್ಯೇಕವಾಗಿ ಪ್ರಚಾರ ನಡೆಸಲು ಅವಕಾಶ ನೀಡಿ ಎಂದು ಹೇಳಿದ್ದೇನೆ ಎಂದು ವಿವರಿಸಿದರು.

ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಟಿಕೆಟ್ ಹಂಚಿಕೆ ಕುರಿತು ಚರ್ಚೆ ನಡೆಯುತ್ತಿದ್ದು, ಹಾಲಿ ಸಂಸದ ರಮೇಶ ಜಿಗಜಿಣಗಿ ಅಥವಾ ಓರ್ವ ದಲಿತ ಯುವಕನಿಗೆ ಟಿಕೆಟ್ ನೀಡಿದರೂ ಗೆಲುಗೆ ಶ್ರಮಿಸುತ್ತೇನೆ. ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕಿದೆ. ಈ ಉದ್ದೇಶದಿಂದ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next