Advertisement

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

10:10 AM May 07, 2024 | Team Udayavani |

ಹಾವೇರಿ: ಮನೆಯ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆಯೂ ಕುಟುಂಬ ಸದಸ್ಯರು ಇಂದು ಬೆಳಿಗ್ಗೆ ಮತಗಟ್ಟೆಗೆ ಬಂದು ಮತದಾನ ಮಾಡುವ ಮೂಲಕ ಮತದಾನದ ಅರಿವು ಮೂಡಿಸಿದ್ದಾರೆ.

Advertisement

ಸೋಮವಾರ ಸಂಜೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ವಾಟರ್ ಮ್ಯಾನ್ ಆಗಿದ್ದ ನಾಗಪ್ಪ ಕಾಳಂಗಿ ಅವರು ಸೋಮವಾರ ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ, ಇದರ ನಡುವೆ ರಾಜ್ಯದ ೧೪ ಕ್ಷೇತ್ರಗಳಿಗೆ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದ್ದು ಅದರಂತೆ ನಾಗಪ್ಪ ಕಾಳಂಗಿ ಅವರ ಕುಟುಂಬ ದುಃಖದ ನಡುವೆಯೂ ಯಜಮಾನನ ಅಂತ್ಯಕ್ರಿಯೆ ನಡೆಯುವ ಮುನ್ನ ಪತ್ನಿ ಚಿನ್ನವ್ವ, ಮಗ ಮಾಲತೇಶ, ಮಗಳು ಜ್ಯೋತಿ ಗ್ರಾಮದ ಪ್ರಥಮಿಕ ಶಾಲೆಯಲ್ಲಿರುವ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next