Advertisement

Loksabha ಚುನಾವಣಾ ಉಸ್ತುವಾರಿ ಘೋಷಿಸಿದ ಬಿಜೆಪಿ: ಕರ್ನಾಟಕಕ್ಕೆ ರಾಧಾ ಮೋಹನ್ ದಾಸ್ ಅಗರ್ವಾಲ್

04:11 PM Jan 27, 2024 | Team Udayavani |

ಹೊಸದಿಲ್ಲಿ: ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಭಾರತೀಯ ಜನತಾ ಪಕ್ಷವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನುನೇಮಕ ಮಾಡಿದೆ.

Advertisement

ಕರ್ನಾಟಕದ ಉಸ್ತುವಾರಿಯನ್ನಾಗಿ ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್  ಅವರನ್ನು ಮತ್ತು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ಸುಧಾಕರ್ ರೆಡ್ಡಿ  ಅವರನ್ನು ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಶನಿವಾರ ಆದೇಶ ಹೊರಡಿಸಿದೆ.

ಕೇರಳಕ್ಕೆ ಪ್ರಕಾಶ್‌ ಜಾವ್ಡೇಕರ್‌, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನ, ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಅವರನ್ನು ನೇಮಕ ಮಾಡಲಾಗಿದೆ.

ಹರಿಯಾಣಕ್ಕೆ ಬಿಪ್ಲಬ್ ಕುಮಾರ್ ದೇವ್, ಹಿಮಾಚಲ ಪ್ರದೇಶಕ್ಕೆ ಶ್ರೀಕಾಂತ್ ಶರ್ಮಾ, ಮಧ್ಯಪ್ರದೇಶಕ್ಕೆ ಮಹೇಂದ್ರ ಕುಮಾರ್ ಸಿಂಗ್, ಒಡಿಶಾಕ್ಕೆ ವಿಜಯಪಾಲ್ ಸಿಂಗ್ ತೋಮರ್, ತಮಿಳುನಾಡಿಗೆ ಅರವಿಂದ್ ಮೆನನ್, ಪಶ್ಚಿಮ ಬಂಗಾಳಕ್ಕೆ ಮಂಗಲ್ ಪಾಂಡೆ ಇವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

Advertisement

ಅಂಡಮಾನ್ ಮತ್ತು ನಿಕೋಬಾರ್​ ಗೆ ವೈ ಸತ್ಯ ಕುಮಾರ್, ಅರುಣಾಚಲ ಪ್ರದೇಶಕ್ಕೆ ಅಶೋಕ್ ಸಿಂಘಾಲ್, ಚಂಡೀಗಢಕ್ಕೆ ವಿಜಯಭಾಯಿ ರೂಪಾನಿ, ಗೋವಾಕ್ಕೆ ಆಶಿಶ್ ಸೂದ್, ಜಾರ್ಖಂಡ್​ಗೆ ಲಕ್ಷ್ಮೀಕಾಂತ ಬಾಜಪೇಯಿ, ಲಡಾಖ್​ಗೆ ತರುಣ್ ಚುಗ್, ಲಕ್ಷ್ಯದ್ವೀಪಕ್ಕೆ ಅರವಿಂದ್ ಮೆನನ್, ಸಿಕ್ಕಿಂಗೆ ದಿಲೀಪ್ ಜೈಸ್ವಾಲ್, ಉತ್ತರಾಖಂಡಕ್ಕೆ ದುಶ್ಯಂತ್ ಕುಮಾರ್ ಗೌತಮ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next