Advertisement

Loksabha election; ಗೆಲುವಿಗಾಗಿ ದೇವರ ಮೊರೆ ಹೋದ ಜೆಡಿಎಸ್ ಕಾರ್ಯಕರ್ತರು

11:34 AM Jun 02, 2024 | Team Udayavani |

ರಾಮನಗರ: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಆಯಾ ಪಕ್ಷದ ನೇತಾರರು, ಕಾರ್ಯಕರ್ತರು ತಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು ಎಂದು ಹಾರೈಸುತ್ತಿದ್ದಾರೆ. ಇದೇ ವೇಳೆ ರಾಮನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಗೆಲ್ಲಿಸಲು ದೇವರಿಗೆ ಮೊರೆ ಹೋಗಿದ್ದಾರೆ.

Advertisement

ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ್, ಮಂಡ್ಯದಲ್ಲಿ ಕುಮಾರಸ್ವಾಮಿ ಹಾಗೂ ದೇಶದಲ್ಲಿ ಎನ್ ಡಿಎ ಮೈತ್ರಿಕೂಟ 400+ಸ್ಥಾನ ಗಳಿಸಲಿ ಎಂದು ಜೆಡಿಎಸ್ ಕಾರ್ಯಕರ್ತರು ರಾಮನಗರ ಶಕ್ತಿ ದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ.

ಚಾಮುಂಡೇಶ್ವರಿ ದೇವಾಲಯದಲ್ಲಿ ಉರುಳು ಸೇವೆ ಮಾಡಿ ತಮ್ಮ ಕೋರಿಕೆ ಈಡೇರಿಸುವಂತೆ ಮೊರೆಯಿಟ್ಟಿದ್ದಾರೆ. 101 ತೆಂಗಿನ ಕಾಯಿ ಹೊಡೆದು ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next