Advertisement

Loksabha; ಕಾಂತೇಶ್ ಗೆ ಟಿಕೆಟ್ ತಪ್ಪುವ ಸಾಧ್ಯತೆ; ಶಿವಮೊಗ್ಗದಲ್ಲಿ ಸೋಶಿಯಲ್ ಮೀಡಿಯಾ ವಾರ್

01:41 PM Mar 12, 2024 | keerthan |

ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕಸರತ್ತು ಮುಂದುವರಿಯುತ್ತಿದ್ದಂತೆ ಶಿವಮೊಗ್ಗದಲ್ಲಿ ಸೋಶಿಯಲ್ ಮೀಡಿಯಾ ವಾರ್ ಶುರುವಾಗಿದೆ.

Advertisement

ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಕೈ ತಪ್ಪುವ ಹಿನ್ನೆಲೆಯಲ್ಲಿ ಕಾಂತೇಶ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುತ್ತಿದ್ದಾರೆ.

ಪಕ್ಷದ ವರಿಷ್ಠ ಯಡಿಯೂರಪ್ಪನವರ ಪುತ್ರರಿಗೆ ಸಕಲ ರಾಜಕೀಯ ಸ್ಥಾನಮಾನ ನೀಡಲಾಗುತ್ತಿದೆ, ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎಂದು ಪೋಸ್ಟ್ ಹಾಕಲಾಗುತ್ತಿದೆ.

ಪಕ್ಷ ನಿಷ್ಠ ಈಶ್ವರಪ್ಪನವರ ಪುತ್ರನ ರಾಜಕೀಯ ಭವಿಷ್ಯ ಡೋಲಾಯಮಾನವಾಗಿದ್ದು, ಈ ನೀತಿಗೆ ನಮ್ಮ ಧಿಕ್ಕಾರ ಎಂದು ಕಾಂತೇಶ್ ಬೆಂಬಲಿಗರು ಪೋಸ್ಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next