Advertisement

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

01:58 PM Mar 21, 2024 | Team Udayavani |

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಗರ ಖಂಡ್ರೆ ಹೆಸರು ಅಂತಿಮವಾಗಿದೆ. ಅಧಿಕೃತ ಪಟ್ಟಿ ಬಿಡುಗಡೆಯಷ್ಟೇ ಬಾಕಿಯಿದೆ.

Advertisement

ಸಾಗರ ಖಂಡ್ರೆ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಪುತ್ರ. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಅಭ್ಯರ್ಥಿಗಳಿಗೆ ಸೂಚನೆ ನೀಡಿದೆ ಎಂದು ವರದಿಯಾಗಿದೆ.

ಬೀದರ್ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಮಾಜಿ ಸಚಿವ ರಾಜಶೇಖರ ಪಾಟೀಲ ಮತ್ತು ಸಾಗರ ಖಂಡ್ರೆ ನಡುವೆ ಪೈಪೋಟಿಯಿತ್ತು. ಇದೀಗ ವರಿಷ್ಠರು ಖಂಡ್ರೆ ಪುತ್ರನಿಗೆ ಟಿಕೆಟ್ ಬಗ್ಗೆ ಖಚಿತ ಪಡಿಸಿದ್ದು, ಅಭ್ಯರ್ಥಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಸಾಗರ ಮತ್ತು ಈಶ್ವರ ಖಂಡ್ರೆ ಅವರು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಸಾಗರ್ ಖಂಡ್ರೆ ಅವರಿಗೆ ಟಿಕೆಟ್ ಅಂತಿಮವಾದ ಹಿನ್ನೆಲೆಯಲ್ಲಿ ಬೀದರ್ ಮತ್ತು ಭಾಲ್ಕಿ ಸೇರಿ ಹಲವೆಡೆ ಕೈ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next