Advertisement

BJP: ಲೋಕಸಮರ- ಜನವರಿ ಅಂತ್ಯದಿಂದ ಬಿಜೆಪಿ ಟಿಕೆಟ್‌ ಘೋಷಣೆ ಶುರು?

11:38 PM Dec 27, 2023 | Team Udayavani |

ಹೊಸದಿಲ್ಲಿ: ಮುಂದಿನ ತಿಂಗಳ 14ರಿಂದ ಸಂಸದ ರಾಹುಲ್‌ ಗಾಂಧಿಯವರ ಭಾರತ ನ್ಯಾಯ ಯಾತ್ರೆ ಶುರುವಾಗಲಿರುವಂತೆಯೇ ಬಿಜೆಪಿ ಅಭ್ಯರ್ಥಿಗಳನ್ನು ಆಖೈರು ಗೊಳಿಸಲು ಸಿದ್ಧತೆ ನಡೆಸಿದೆ. ಮೂಲಗಳ ಪ್ರಕಾರ 2024ರ ಜನವರಿ ಅಂತ್ಯದ ಒಳಗಾಗಿ ಒಂದಷ್ಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಖೈರುಗೊಳಿಸುವ ಸಾಧ್ಯತೆ ಅಧಿಕವಾಗಿದೆ.

Advertisement

ಪ್ರಸಕ್ತ ಸಾಲಿನ ಚುನಾವಣೆಯಲ್ಲಿ ರಾಜ್ಯಸಭೆಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಕಣಕ್ಕೆ ಇಳಿಸುವ ಚಿಂತನೆ ನಡೆಸಿದೆ. ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣೆ ಆಯೋಗ ಫೆಬ್ರವರಿ ಅಂತ್ಯ ಅಥವಾ ಮಾರ್ಚ್‌ ಮೊದಲ ವಾರ ದಲ್ಲಿ ಘೋಷಿಸುವ ಸಾಧ್ಯತೆಗಳಿವೆ. ಅದಕ್ಕೂ ಮುನ್ನ ವಿಧಾನಸಭೆ ಕಾರ್ಯತಂತ್ರವನ್ನೇ ಲೋಕಸಭೆಗೂ ಬಳಸಿ ಮುಂಚಿತವಾಗಿ ಟಿಕೆಟ್‌ ಘೋಷಿಸಲು ಚಿಂತನೆ ನಡೆಸಲಾಗಿದೆ. ಪಂಚರಾಜ್ಯ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮೊದಲೇ ಘೋಷಿಸಿತ್ತು. ಇದರಿಂದಾಗಿ ಪ್ರತಿಸ್ಪರ್ಧಿಗಳನ್ನು ಮಣಿಸುವಲ್ಲಿ ಪ್ರಯೋಜನವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next