Advertisement

ರಾಮ ಹಿಂದೂಗಳಿಗೆ ಮಾತ್ರವಲ್ಲ, ಜಗತ್ತಿಗೇ ಸೇರಿದವನು:ಫಾರೂಕ್‌ ಅಬ್ದುಲ್ಲ

08:49 AM Jan 04, 2019 | Team Udayavani |

ಹೊಸದಿಲ್ಲಿ: ರಾಮ ಹಿಂದೂಗಳಿಗೆ ಮಾತ್ರ ಸೇರಿದವನಲ್ಲ, ಜಗತ್ತಿಗೇ ಸೇರಿದನು. ಅಯೋಧ್ಯೆ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಬೇಕಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ.

Advertisement

ಆಯೋಧ್ಯೆಯಲ್ಲಿನಭೂ ಒಡೆತನ ಯಾರಿಗೆ ಸೇರಿದ್ದು ಎಂಬ ಪ್ರಕರಣದ ವಿಚಾರಣೆ ದಿನಾಂಕವನ್ನು ಸೂಕ್ತ ಪೀಠವು ಇದೇ ಜನವರಿ 10ರಂದು ಪ್ರಕಟಿಸಿ ಆದೇಶ ಹೊರಡಿಸುವುದಾಗಿ  ಸುಪ್ರೀಂ ಕೋರ್ಟ್‌ ಹೇಳಿದ ಬೆನ್ನಲ್ಲೇ  ಅಬ್ದುಲ್ಲಾ ಅವರು ಈ ಹೇಳಿಕೆ ನೀಡಿದ್ದಾರೆ.

ಇಡೀ ಪ್ರಕರಣವನ್ನು ಕೋರ್ಟ್‌ಗೆ ತೆಗೆದುಕೊಂಡು ಹೋಗಬಾರದು. ಈ ವಿಚಾರವನ್ನು ಜನರು ಮೇಜಿನ ಚರ್ಚೆ ಮಾಡುವ ಮೂಲಕ ಬಗೆಹರಿಸಬೇಕಾಗಿದೆ.ಯಾಕೆ ಈ ವಿಚಾರವನ್ನು ಕೋರ್ಟ್‌ಗೆ ಎಳೆದೊಯ್ಯುವುದು? ಈ ವಿಚಾರ ಮಾತುಕತೆಯ ಮೂಲಕ ಬಗೆ ಹರಿಯುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದರು. 

ಯಾರೂ ಕೂಡ ರಾಮನ ವಿರುದ್ಧ ಇಲ್ಲ.ಆದರೆ ಅಯೋಧ್ಯೆ ವಿಚಾರ ಶೀಘ್ರದಲ್ಲಿ ಬಗೆ ಹರಿಯಬೇಕಾಗಿದೆ.ಯಾವ ದಿನ ಈ ವಿಚಾರ ಬಗೆಹರಿಯುತ್ತದೋ ಆದಿನ ನಾನು ಮಂದಿರಕ್ಕಾಗಿ ಇಟ್ಟಿಗೆ ಹಾಕಲು ತೆರಳುತ್ತೇನೆ ಎಂದರು.

ನವೆಂಬರ್‌ನಲ್ಲಿ ಫಾರೂಕ್‌ ಅಬ್ದುಲ್ಲಾ ಅವರು ರಾಮ ಜಗತ್ತಿಗೇ ಸೇರಿದವನು. ಅಯೋಧ್ಯೆಯಲ್ಲೇ ಯಾಕೆ ಮಂದಿರ ನಿರ್ಮಾಣ ಮಾಡಬೇಕು ಎಂದು ಪ್ರಶ್ನಿಸಿದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next