Advertisement

Ayodhya; ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಶುಭ ಮುಹೂರ್ತ ನಿಗದಿ

09:00 PM Oct 25, 2023 | Team Udayavani |

ಹೊಸದಿಲ್ಲಿ:ಮುಂದಿನ ವರ್ಷ ಜನವರಿ 22 ರಂದು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕೂಡ ಉಪಸ್ಥಿತರಿರಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ.

Advertisement

ಜ.22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಬುಧವಾರ ತಿಳಿಸಿದ್ದಾರೆ.

ರಾಮಲಲ್ಲಾ ಪ್ರತಿಷ್ಠೆಗೆ ಪ್ರಧಾನಿ ಮೋದಿಯವರಿಗೆ ವಿಧ್ಯುಕ್ತ ಆಹ್ವಾನ

ರಾಮನ ಪ್ರಾಣ ಪ್ರತಿಷ್ಠೆಯನ್ನು ನೆರವೇರಿಸಿಕೊಡುವಂತೆ ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮಂದಿರ ಟ್ರಸ್ಟ್ ವತಿಯಿಂದ ಅಧಿಕೃತ ಆಹ್ವಾನ ನೀಡಲಾಗಿದೆ.‌ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ , ಕೋಶಾಧಿಕಾರಿ ಗೋವಿಂದಗಿರಿ ಮಹಾರಾಜ್ ವಿಶ್ವಸ್ಥರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.

Advertisement

ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಹಿರಿಯರು ಭೇಟಿ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ”ನಾನು ಆಶೀರ್ವಾದ ಪಡೆದಿದ್ದೇನೆ ಮತ್ತು ಅಂತಹ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಅದೃಷ್ಟ ಎಂದು ಹೇಳಿದ್ದಾರೆ.

“ಜೈ ಶ್ರೀ ರಾಮ್! ಇಂದು ಭಾವನೆಗಳು ತುಂಬಿದ ದಿನ. ಇತ್ತೀಚೆಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧಿಕಾರಿಗಳು ನನ್ನನ್ನು ಭೇಟಿ ಮಾಡಲು ನನ್ನ ನಿವಾಸಕ್ಕೆ ಬಂದಿದ್ದರು. ಅವರು ಶ್ರೀರಾಮ ಮಂದಿರದ ಶಂಕುಸ್ಥಾಪನೆಯ ಸಂದರ್ಭದಲ್ಲಿ ಅಯೋಧ್ಯೆಗೆ ಬರಲು ನನ್ನನ್ನು ಆಹ್ವಾನಿಸಿದ್ದರು. ನಾನು ತುಂಬಾ ಆಶೀರ್ವಾದ ಪಡೆದಿದ್ದೇನೆ. ನನ್ನ ಜೀವನದಲ್ಲಿ ನಾನು ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ, ”ಎಂದು ಪಿಎಂ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಸಾವಿರಾರು ಮಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next