Advertisement

ಕಾರು ಲಾರಿ ನಡುವೆ ಭೀಕರ ಅಪಘಾತ:  ಸ್ಥಳದಲ್ಲೇ ಮೂವರ ಸಾವು

10:03 AM Feb 10, 2020 | Team Udayavani |

ವಿಜಯಪುರ: ಕಾರು ಹಾಗೂ ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಸಂಭವಿಸಿದೆ.

Advertisement

ಹೊಸಪೇಟೆಯಿಂದ ವಿಜಯಪುರ ನಗರಕ್ಕೆ ಆಗಮಿಸುತ್ತಿದ್ದ‌ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹೊಸಪೇಟೆ ಮೂಲದ ಏಸುದಾಸ (32), ರಾಜೇಶ (32) ಹಾಗೂ ಭುಜಂಗರಾವ್ (48) ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಬಳಿಕ ಲಾರಿ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಲಾರಿ ಬಿಟ್ಡು ಪರಾರಿಯಾಗಿದ್ದಾರೆ.

ಘಟನೆ ಬಳಿಕ ಸ್ಥಳೀಯರು ದುರಂತ ಸ್ಥಳದಲ್ಲಿ ಮೇಲ್ಸೇತುವೆ ನಿರ್ಮಿಸಲು‌ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಕೂಡಗಿ ಎನ್.ಟಿ.ಪಿ.ಸಿ. ಪೋಲಿಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next