Advertisement

ಮೆಲ್ಕಾರ್: ಲಾರಿ- ಬೈಕ್ ಢಿಕ್ಕಿ; ಸವಾರ ಮೃತ್ಯು

06:46 PM Nov 17, 2021 | Team Udayavani |

ಬಂಟ್ವಾಳ: ರಾ.ಹೆ.೭೫ರ ಮೆಲ್ಕಾರ್ ಜಂಕ್ಷನ್ ನಲ್ಲಿ ನ.೧೬ರ ತಡರಾತ್ರಿ ಲಾರಿ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮಂಗಳೂರು ನಿವಾಸಿ ಗಣೇಶ್(೩೬) ಮೃತ ದುರ್ದೈವಿ. ಅವರು ಮೆಲ್ಕಾರ್ ಜಂಕ್ಷನ್‌ ನಲ್ಲಿ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದ ವೇಳೆಗೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ.

Advertisement

ಇದನ್ನೂ ಓದಿ:- ನನ್ನ ದೃಷ್ಟಿಯೇ ಅವನಿಗೆ ಆಯಿತೇನೋ ಎಂದು ಕಣ್ಣೀರು ಹಾಕಿದ ಶಿವಣ್ಣ
ಗಣೇಶ್ ಅವರು ಮೆಲ್ಕಾರ್ ಸಮೀಪದ ಮಾರ್ನಬೈಲು ಸರ್ವೀಸ್ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಯ ಸಂದರ್ಭದಲ್ಲಿ ಲಾರಿ ಚಾಲಕ ಅಪಘಾತದಲ್ಲಿ ತಪ್ಪಿಸಲು ಪ್ರಯತ್ನಿಸಿದ ವೇಳೆ ಮೆಲ್ಕಾರ್ ನಲ್ಲಿದ್ದ ಸರ್ಕಲ್ ಹುಡಿಯಾಗಿದೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next