Advertisement

ಗೋಳಿತೊಟ್ಟು :ಲಾರಿ –ಕಾರು ಢಿಕ್ಕಿ 4 ಜನರಿಗೆ ಗಾಯ

09:18 AM Jul 21, 2019 | sudhir |

ನೆಲ್ಯಾಡಿ : ಲಾರಿ ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟುವಿನಲ್ಲಿ ಶನಿವಾರ ಸಂಭವಿಸಿದೆ.

Advertisement

ಗಾಯಗೊಂಡವರನ್ನು ನಿತ್ಯಾನಂದ, ಶ್ರೀಧರ, ಮಣಿಕಂಠ, ನರಸಿಂಹ ಹಾಗೂ ಮನೋಜ್ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ನೆಲ್ಯಾಡಿ ಹೊರಠಾಣೆ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next