Advertisement

ಲಾರಿ-ಕಾರು ಢಿಕ್ಕಿ; ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

09:55 AM May 29, 2022 | Team Udayavani |

ಮೂಡಿಗೆರೆ: ಕಾರು- ಲಾರಿ ಮುಖಾಮುಖಿ ಢಿಕ್ಕಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಭಾನುವಾರ ನಡೆದಿದೆ.‌

Advertisement

ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರಿಗೆ, ಕಾರ್ಕಳದಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ತರಕಾರಿ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಪೊಲೀಸ್ ಸರ್ಪಗಾವಲಿನಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶ

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯನ್ನು ಇತ್ತೀಚಿಗೆ ಅಗಲೀಕರಣ ಮಾಡಲಾಗಿದೆ. ವಾಹನ ಸವಾರರು ಮನಸ್ಸಿಗೆ ಬಂದ ಹಾಗೆ ವಾಹನ ಚಲಾಯಿಸುವುದರಿಂದ  ಅಪಘಾತಗಳು ಆಗಾಗ ನಡೆಯುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next