Advertisement
ಸುಂಟಿಕೊಪ್ಪ ಕಡೆಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಲಾರಿ ಕುಶಾಲನಗರ ಕಡೆಯಿಂದ ಕೊಡಗರಹಳ್ಳಿಗೆ ಆಗಮಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಕೊಡಗರಹಳ್ಳಿಯ ಉಪ್ಪುತೋಡು ನಿವಾಸಿ ಇರ್ಫಾನ್ (26) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಉಪ್ಪುತೋ ಡಿನ ಸಹ ಪ್ರಯಾಣಿಕ ಸಮದ್ ಅವರು ಮೈಸೂರಿನ ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಹೆದ್ದಾರಿಯಲ್ಲಿ ಕಾಂಕ್ರೀಟ್ ಮಿಶ್ರಣ ತುಂಬಿದ ಲಾರಿ ಹಾಗೂ ಟಿಪ್ಪರ್ಗಳು ಅತಿವೇಗ ಮತ್ತು ಅಜಾಗರೂಕತೆಯಿಂದ ಸಂಚರಿಸುತ್ತಿವೆ. ಪರಿಣಾಮ ಅಪಘಾತಗಳು ಹೆಚ್ಚಾಗುತ್ತಿವೆ. ಪೊಲೀಸರು ಹಾಗೂ ಸಾರಿಗೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.