Advertisement

Shimoga ವಿದ್ಯಾನಗರ ಸೇತುವೆಗೆ ಲಾರಿ ಡಿಕ್ಕಿ; ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ನಡೆಯಿತು ಘಟನೆ

11:29 AM Mar 05, 2024 | keerthan |

ಶಿವಮೊಗ್ಗ: ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ನಗರದ ವಿದ್ಯಾನಗರ ವೃತ್ತಾಕಾರದ ಸೇತುವೆಗೆ ಲಾರಿ ಡಿಕ್ಕಿಯಾದ ಘಟನೆ ನಡೆದಿದೆ.

Advertisement

ನಗರದ ವಿದ್ಯಾನಗರ ಮೇಲ್ಸೇತುವೆ ಮೇಲೆ ಅಪಘಾತ ನಡೆದಿದ್ದು, ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಹೊಳೆಹೊನ್ನೂರು ದಿಕ್ಕಿನಿಂದ ಬಂದ ಲಾರಿಯೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಇದರ ರಭಸಕ್ಕೆ ಲಾರಿ ಮುಂಭಾಗ ಜಖಂಗೊಂಡಿದೆ.

ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next