Advertisement

Tragic: ರಸ್ತೆ ಬದಿ ಶೌಚಕ್ಕೆ ಕೂತಿದ್ದ ಬಾಲಕ ಲಾರಿಗೆ ಬಲಿ

09:02 AM Apr 02, 2024 | Team Udayavani |

ಬೆಂಗಳೂರು: ರಸ್ತೆ ಬದಿ ಶೌಚಕ್ಕೆ ಕೂತಿದ್ದ 6 ವರ್ಷದ ಬಾಲಕನ ಮೇಲೆ ಗೂಡ್ಸ್‌ ವಾಹನದ ಚಕ್ರ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿ.ಟಿ. ಮಾರ್ಕೆಟ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ವಿನೋಭನಗರದ ಕೆಎಚ್‌ಬಿ ಕಾಲೋನಿಯ ಕೊಳಗೇರಿಯ ಅಶ್ವಂತ್‌ (6) ಮೃತ ಬಾಲಕ. ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸಿದ್ದಯ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಕೊಳಗೇರಿ ನಿವಾಸಿ ಶಶಿಕುಮಾರ್‌ ಎಂಬುವರ ಪುತ್ರ ಅಶ್ವಂತ್‌ ಬೆಳಗ್ಗೆ ಸಿದ್ದಯ್ಯ ರಸ್ತೆಯ ಬದಿ ಶೌಚಕ್ಕೆ ಕುಳಿತ್ತಿದ್ದ. ಈತನ ಹಿಂಭಾಗವೇ ಸರಕು ಸಾಗಣೆ ವಾಹನ ನಿಲುಗಡೆ ಮಾಡಲಾಗಿತ್ತು. ಬಳಿಕ ಚಾಲಕ ವಾಹನದ ಹಿಂಭಾಗ ಬಾಲಕ ಶೌಚಕ್ಕೆ ಕುಳಿತಿರುವುದನ್ನು ಗಮನಿಸದೆ ವಾಹನವನ್ನು ಹಿಮ್ಮುಖವಾಗಿ ಚಲಾಯಿಸಿದ್ದಾನೆ. ಈ ವೇಳೆ ಬಾಲಕನ ಮೇಲೆಯೇ ವಾಹನದ ಹಿಂಬದಿ ಚಕ್ರ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು.

ಸರಕು-ಸಾಗಣೆ ವಾಹನ ಚಾಲಕನ ನಿರ್ಲಕ್ಷ್ಯವೇ ಘಟನೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೀಗಾಗಿ ಆ ವಾಹನವನ್ನು ಜಪ್ತಿ ಮಾಡಿದ್ದು, ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಈ ಸಂಬಂಧ ಸಿ.ಟಿ.ಮಾರ್ಕೆಟ್‌ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next