Advertisement

ಶಿರಾಡಿ: ಗುಂಡಿಗೆ ಬಿದ್ದು ಮರಕ್ಕೆ ಗುದ್ದಿದ ಲಾರಿ, ಚಾಲಕ ಸ್ಥಳದಲ್ಲೇ ಸಾವು

10:09 AM Apr 22, 2021 | Team Udayavani |

ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರುಗಳನ್ನು ಸಾಗಿಸುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದು ಮರಕ್ಕೆ ಗುದ್ದಿದ್ದ ಘಟನೆ ಶಿರಾಡಿ ಗ್ರಾಮದ ಕೊಡ್ಡೆಕಲ್ ಎಂಬಲ್ಲಿ ನಡೆದಿದೆ.

Advertisement

ಘಟನೆಯ ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತ ಚಾಲಕನನ್ನು ಜಾರ್ಖಂಡ್ ಮೂಲದ ನುಸ್ರಲ್ಲಾಖಾನ್ (31 ವರ್ಷ) ಎಂದು ಗುರುತಿಸಲಾಗಿದೆ.

ಕಾರುಗಳನ್ನು ಸಾಗಿಸುವ ದೊಡ್ಡ ಲಾರಿ ಇದಾಗಿದ್ದು, ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು. ಶಿರಾಡಿ ಘಾಟ್ ನ ಕೊಡ್ಡೆಕಲ್ ಬಳಿ ರಾತ್ರಿ ಎರಡು ಗಂಟೆಯ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದು ಮರಕ್ಕೆ ಗುದ್ದಿದೆ.

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next