Advertisement

ಹೊಸಂಗಡಿ ಕೆರೆಕಟ್ಟೆಯಲ್ಲಿ ಲಾರಿ ಪಲ್ಟಿ

03:09 PM Aug 04, 2019 | Team Udayavani |

ಸಿದ್ದಾಪುರ: ಶಿವಮೊಗ್ಗ- ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಅಕ್ಕಿ ತುಂಬಿದ್ದ ಲಾರಿಯೊಂದು ಹೊಸಂಗಡಿ, ಕೆರೆಕಟ್ಟೆಯಲ್ಲಿ ಪಲ್ಟಿಯಾಗಿದ್ದು ಸಂಚಾರಕ್ಕೆ ಅಡಚಣೆಯಾಗಿದೆ.

Advertisement

ಮಧ್ಯಾಹ್ನ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಲಾರಿಯಲ್ಲಿ ಚಾಲಕ ಮತ್ತು ನಿರ್ವಾಹಕ ಇದ್ದರು. ಯಾರಿಗೂ ಗಾಯಗಳಾಗಿಲ್ಲ.

ದಾವಣಗೆರೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಸ್ಕಿಡ್‌ ಆಗಿದ್ದರಿಂದ ಲಾರಿ ಮಗುಚಿ ಬಿದ್ದಿದೆ ಎನ್ನಲಾಗಿದೆ.

ಸ್ಥಳದಲ್ಲಿ ಜನರು ಸೇರಿದ್ದು, ಲಾರಿಯನ್ನು ರಸ್ತೆಯಿಂದ ತೆರವುಗೊಳಿಸಿ, ಸಂಚಾರ ಸುಗಮಗೊಳಿಸಲು ಯತ್ನಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next