Advertisement

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

11:48 PM Jun 25, 2024 | Team Udayavani |

ಉಪ್ಪಿನಂಗಡಿ: ಸ್ಟೇರಿಂಗ್‌ ತುಂಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಹೆದ್ದಾರಿ ಪಕ್ಕದ ಅಂಗಡಿಗೆ ನುಗ್ಗಿದ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ.

Advertisement

ಬೆಂಗಳೂರಿನ ಕಡೆಗೆ ಕೆಂಪು ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಗುಂಡ್ಯ ಸಮೀಪ ಶಿರಾಡಿ ಗ್ರಾಮದ ಅಡ್ಡಹೊಳೆ ಸೇತುವೆ ದಾಟಿ ಹೋಗುತ್ತಿದ್ದಂತೆ ಸ್ಟೇರಿಂಗ್‌ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಪಕ್ಕದ ಟಯರ್‌ ಪಂಚರ್‌ ಅಂಗಡಿ ಹಾಗೂ ಹೊಟೇಲ್‌ಗೆ ನುಗ್ಗಿದೆ.

ಈ ವೇಳೆ ಅಂಗಡಿಯಲ್ಲಿ ಇಬ್ಬರು ಮಹಿಳೆಯರಿದ್ದು ಅಪಾಯದ ಅರಿವಾಗುತ್ತಿದ್ದಂತೆ ಅಲ್ಲಿಂದ ಓಡಿದ್ದರಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದಾಗಿ ಎರಡು ಅಂಗಡಿಗಳಿಗೆ ಹಾನಿಯಾಗಿದೆ. ಲಾರಿ ಚಾಲಕ ಕಾರ್ತಿಕ್‌ ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next