Advertisement

ಕೆರೆಗೆ ಇಳಿದ ಶುಂಠಿ ತುಂಬಿದ್ದ ಲಾರಿ: ಪ್ರಾಣಾಪಾಯದಿಂದ ಪಾರಾದ ಚಾಲಕ, ಸಹಾಯಕ

09:30 AM Jan 20, 2021 | Team Udayavani |

ಹುಣಸೂರು: ಶುಂಠಿ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಯೊಳಗಿಳಿದಿರುವ ಘಟನೆ ಹುಣಸೂರು- ಹನಗೋಡು ರಸ್ತೆಯ ತಟ್ಟೆ ಕೆರೆ ಗೇಟ್ ಬಳಿಯಲ್ಲಿ ಮಂಗಳವಾರ ಮದ್ಯರಾತ್ರಿ ನಡೆದಿದೆ.

Advertisement

ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ವಿವಿಧೆಡೆ ಶುಂಠಿ ತುಂಬಿಕೊಂಡು ತಮಿಳುನಾಡು ಕಡೆಗೆ ತೆರಳುತ್ತಿದ್ದ ಲಾರಿಯು ತಟ್ಟೆ ಕೆರೆ ಗೇಟ್ ಬಳಿಯ ಕೆರೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆರೆ ಏರಿಗೆ ಅಳವಡಿಸಿದ್ದ ತಡೆ ಕಲ್ಲುಗಳಿಗೆ ಢಿಕ್ಕಿ ಹೊಡೆದು ಕೆರೆಯೊಳಕ್ಕೆ ಇಳಿದಿದೆ.

ಇದನ್ನೂ ಓದಿ:ಪೊಲೀಸರು ತಡೆದರೆ ರಸ್ತೆ ಬಂದ್ ಮಾಡಿ: ಕಾಂಗ್ರೆಸ್ ಕಾರ್ಯಕರ್ತರು, ರೈತರಿಗೆ ಡಿಕೆಶಿ ಕರೆ

ಅದೃಷ್ಟಾವಶಾತ್ ಕೆರೆಯಲ್ಲಿ ನೀರು ಕಡಿಮೆಯಿದ್ದು, ಚಾಲಕ, ಕ್ಲೀನರ್ ಸೇರಿದಂತೆ ಲಾರಿಯೊಳಗಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್‌ಗೆ ಮೊದಲ ಮಹಿಳಾ ಫೈಟರ್‌ ಪೈಲಟ್‌!

Advertisement
Advertisement

Udayavani is now on Telegram. Click here to join our channel and stay updated with the latest news.

Next