Advertisement

ನಷ್ಟದಲ್ಲಿರುವ ಸಕ್ಕರೆ ಕಾರ್ಖಾನೆ ಖಾಸಗೀಕರಣ

10:18 PM Dec 14, 2019 | Lakshmi GovindaRaj |

ಬೆಂಗಳೂರು: ನಷ್ಟದಲ್ಲಿರುವ ಸರ್ಕಾರಿ ಸಕ್ಕರೆ ಕಾರ್ಖಾನೆ ಗಳನ್ನು ಖಾಸಗಿಯವರಿಗೆ ನೀಡಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ಸಕ್ಕರೆ ಸಚಿವ ಸಿ.ಟಿ.ರವಿ ಹೇಳಿದರು.

Advertisement

“ಉದಯವಾಣಿ’ ಸಂವಾದದಲ್ಲಿ ಮಾತನಾಡಿದ ಅವರು, ಮೈಶುಗರ್‌ ಹಾಗೂ ಎಂಪಿಎಂಎಲ್‌ ಕಾರ್ಖಾನೆಗಳ ಪುನಶ್ಚೇತನಕ್ಕೆ 500 ಕೋಟಿ ರೂ.ಗೂ ಹೆಚ್ಚು ಅನುದಾನ ನೀಡಲಾಗಿದೆ. ಆದರೆ, ಎರಡೂ ಕಾರ್ಖಾನೆಗಳು ನಷ್ಟದಲ್ಲಿರುವುದರಿಂದ ಅವುಗಳನ್ನು ಸರ್ಕಾರವೇ ಮುಂದುವರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ, ಖಾಸಗೀಕರಣಕ್ಕೆ ನಿರ್ಧರಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next