Advertisement

ಲಾಟರಿಯಲ್ಲಿ 80 ಲಕ್ಷ ರೂ. ಗೆದ್ದ ಸಂತಸದಲ್ಲಿ ಪಾರ್ಟಿ ಮಾಡುತ್ತಿದ್ದ ವ್ಯಕ್ತಿ ಮೃತ್ಯು

03:30 PM Apr 04, 2023 | Team Udayavani |

ತಿರುವನಂತಪುರಂ: 80 ಲಕ್ಷ ರೂ. ಲಾಟರಿ ಹಣವನ್ನು ಗೆದ್ದ ಸಂತಸದಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ನಿಗೂಢವಾಗಿ ಮೃತಪಟ್ಟಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿರುವ ಪಂಗೋಡ್ ನಲ್ಲಿ ನಡೆದಿರುವುದು ವರದಿಯಾಗಿದೆ.

Advertisement

ಪಂಗೋಡ್ ನಿವಾಸಿ ಸಜೀವ್ (35)‌ ಮೃತ ವ್ಯಕ್ತಿ.

ಇದನ್ನೂ ಓದಿ: ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

ಕಳೆದ ಕೆಲ ದಿನಗಳ ಹಿಂದಷ್ಟೇ ಕೇರಳ ರಾಜ್ಯ ಲಾಟರಿಯಲ್ಲಿ ಸಜೀವ್‌ ಅವರಿಗೆ 80 ಲಕ್ಷ ರೂ. ಬಂದಿದೆ. ಇದೇ ಸಂತಸದಲ್ಲಿ ಶನಿವಾರ( ಏ. 1 ರಂದು) ಬಾಡಿಗೆ ಮನೆಯೊಂದಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮಾಡುವ ಪ್ಲ್ಯಾನ್‌ ಮಾಡಿದ್ದಾರೆ.

ಪಾರ್ಟಿ ಮಾಡುತ್ತಿದ್ದ ವೇಳೆ ಎಲ್ಲರೂ ಮದ್ಯದ ನಶೆಯಲ್ಲಿದ್ದರು. ಈ ವೇಳೆ ಸಂತೋಷ್ ಎಂಬ ವ್ಯಕ್ತಿ ಸಜೀವ್ ಅವರನ್ನು ತಳ್ಳಿದ್ದಾರೆ. ಪರಿಣಾಮ ಸಜೀವ್ , ರಬ್ಬರ್ ತೋಟದ ಆಳದ ಹೊಂಡಕ್ಕೆ ಬಿದ್ದಿದ್ದಾರೆ. ಆ ಬಳಿಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಸೋಮವಾರ ಸಂಜೆ ಅವರು ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.

Advertisement

ಈ ಬಗ್ಗೆ ಕೇಸ್‌ ದಾಖಲಿಸಿದ್ದು, ಸಾವಿಗೆ ನಿಖರ ಕಾರಣವೇನೆಂಬುದು ಮರಣೋತ್ತರ ಪರೀಕ್ಷೆ ಬಳಿಕವೇ ತಿಳಿದು ಬರಲಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next