Advertisement

ಜಾತಕ ಕುಂಡಲಿಯಲ್ಲಿ ಪ್ರೀತಿ, ಪ್ರೇಮದ ವಿಚಾರ

12:36 PM Jan 06, 2018 | |

ಜೀವನದಲ್ಲಿ ತಂದೆ ತಾಯಿಗಳ ಪ್ರೀತಿ ಬೇರೆ, ಅಣ್ಣ ತಮ್ಮಂದಿರ ಪ್ರೀತಿ ಬೇರೆ. ಗೆಳೆತನದ ಪ್ರೀತಿ ವಿಶ್ವಾಸ ಬೇರೆ. ಸತಿಪತಿಗಳ ವಿಚಾರದಲ್ಲಿನ ಪ್ರೀತಿಯ ಬಗೆಯೇ ಬೇರೆ. ಇಲ್ಲಿಂದಾಚೆಗೆ ಸಲ್ಲುವ ಪ್ರೀತಿಗಳೂ ಬೇರೆ ಬೇರೆ. ಮದುವೆಗಿಂತ ಮುಂಚಿನ ಸಂಬಂಧ, ಮದುವೆಯ ನಂತರದ ಸಂಬಂಧ, ಜೀವನದಲ್ಲಿ ದಾರಿ ತಪ್ಪಿ ನಡೆಯುವ ಲೈಂಗಿಕ ವಿಚಾರ ಇತ್ಯಾದಿ ಎಲ್ಲವೂ ಬಗೆಬಗೆಯ ವಿಧಾನಗಳಿಂದಾಗಿ ವಿಚಿತ್ರವಾದ ಸಂಗತಿಗಳನ್ನು ಹೊರಚೆಲ್ಲುತ್ತಿರುತ್ತವೆ. ಕೆಲವರಿಗೆ ಸಲಿಂಗ ಪ್ರೇಮವೇ ಅನನ್ಯವಾದುದು. ಉಭಯ ರೀತಿಯ ಪ್ರೇಮ ವ್ಯವಹಾರಗಳಲ್ಲಿ ತೊಡಗಿಕೊಂಡವರೂ ಇದ್ದಾರೆ.

Advertisement

ಯಾಕೆ ಮದುವೆಗಳು ಭದ್ರವಾಗುವುದು ಅಪರೂಪ?
ಮದುವೆ ಎನ್ನುವುದು ಮಾನವನ ಜೀವನದಲ್ಲಿ ಉದಯವಾದ ವಿಧವಿಧವಾದ ನಾಗರಿಕತೆಗಳು ಬೆಳೆದಾದ ಮೇಲೆ ಹುಟ್ಟಿಕೊಂಡ ಸಂಸ್ಕಾರ. ಒಂದು ಗಂಡು ಜೀವನದ ಸಂದರ್ಭದಲ್ಲಿ ಮಧುರವಾದ ಜೀವನವನ್ನು ಪ್ರಾರಂಭಿಸಲು ಮಂಗಲಕಾರ್ಯದ ಚೌಕಟ್ಟಿನಲ್ಲಿ ಹೆಣ್ಣುಗಂಡುಗಳನ್ನು ಅಧಿಕೃತವಾಗಿ ಒಗ್ಗೂಡಿಸುವ ವಿಧಾನವೇ ಮದುವೆ. ಇಲ್ಲಿ ಪ್ರತಿ ಹೆಣ್ಣಿನ, ಗಂಡಿನ ನಕ್ಷತ್ರರಾಶಿಗಳ ಹೊಂದಾಣಿಕೆ ಹಾಗೂ ಹೆಣ್ಣು ಗಂಡಿನ ಜಾತಕ ಕುಂಡಲಿಯಲ್ಲಿ ಕಳತ್ರ ಸ್ಥಾನಗಳ (ಬಾಳ ಸಂಗಾತಿ ಸ್ಥಾನಗಳ) ಬಲಾಬಲಗಳ ಮೇಲಿಂದ ಮದುವೆ ಎಂಬ ಬಾಳಿನ ಮಧುರ ಪಲ್ಲವಿಯನ್ನು ಪ್ರಾರಂಭಿಸಬೇಕಾಗುತ್ತದೆ. ಶುಕ್ರ ಹಾಗೂ ಕುಜರು ತಂತಮ್ಮ ಶಕ್ತಿ ಹಾಗೂ ವಿನಾಶಕ ಶಕ್ತಿಯನ್ನು ಒಬ್ಬನ ಅಥವಾ ಒಬ್ಬಳ ಜಾತಕದಲ್ಲಿ ಸಕಾರಾತ್ಮಕವಾಗಿ ಮಿಡಿಸುವಂತಾದರೆ ಮದುವೆಯ ಬಂಧಕ್ಕೆ ಅನನ್ಯತೆಯ ಸಿದ್ಧಿ ದೊರಕುತ್ತದೆ. ಆದರೆ ಕಳತ್ರ ಸ್ಥಾನದ ಶಕ್ತಿ ಒದಗುವುದು, ಕುಜ ಅಥವಾ ಶುಕ್ರರು ದೋಷಕರಾಗದೇ ಇರುವುದು, ನಕ್ಷತ್ರ ಹಾಗೂ ರಾಶಿಗಳು ಹೆಣ್ಣು ಗಂಡಿನ ಸಂಬಂಧವಾಗಿ ಮುಕ್ತವಾಗಿ ಕೂಡಿ ಬರುವುದು ಸುಲಭದ ಮಾತಲ್ಲ. ಕಷ್ಟದ ವಿಚಾರವಿದು.

ಹೆಣ್ಣು ಗಂಡಿನ ಹೊಂದಾಣಿಕೆ ಹಾಗೂ ಆಯ್ಕೆಗಳು ಸ್ವರ್ಗಭಾಗ್ಯ ಸಿದ್ಧಿಯೇ?
ಸಾಮಾನ್ಯವಾಗಿ ಮದುವೆಗಳು ಸ್ವರ್ಗದಲ್ಲಿ ನಿಶ್ಚಯಿಸಲ್ಪಟ್ಟಿರುತ್ತವೆ ಎಂಬ ಮಾತಿದೆ. ನಮ್ಮ ಜೀವನದಲ್ಲಿ ಈ ಮಾತು ಹೌದು ಎಂಬುದನ್ನು ಯಾರೇ ಆಗಲಿ ಒಪ್ಪಿಕೊಳ್ಳಬೇಕು. ಸಿನಿಮಾ ಜೀವನ ಯಾರಿಗೂ ಆದರ್ಶವಾಗಬಾರದು. ಆದರೂ ಉದಾಹರಣೆಗೆ ಸಿನಿಮಾರಂಗದ ವಿಚಾರವನ್ನು ನಾವು ವಿಶ್ಲೇಷಿಸಲೇಬೇಕು. ಸಿನಿಮಾ ವಲಯದಲ್ಲಿ ಯಾರು ಯಾರನ್ನೋ ಮದುವೆಯಾಗುವ ವಿಚಾರವನ್ನು ನಾವು ಕೇಳುತ್ತಿರುತ್ತೇವೆ. ಆದರೆ, ನಂಬಿದ ವಿಚಾರವೇ ಬೇರಾಗಿ, ಒಬ್ಬ ಇನ್ನೊಬ್ಬಳಾÂರನ್ನೋ, ಒಬ್ಬಳು ಇನ್ಯಾರೋ ಒಬ್ಬನನ್ನು ವರಿಸುತ್ತಾರೆ. ಇದಕ್ಕೆ ನೂರಾರು ಉದಾಹರಣೆಗಳನ್ನು ಕೊಡಬಹುದು. ತಿಳಿದದ್ದು ಬೇರೆ ಕತೆ ಇರುತ್ತದೆ. ನಿಜವಾದ ಕತೆ ಹೊಸ ತಿರುವಿಗೆ ಶೀಘ್ರವಾಗಿ ಬದಲಾಗಿ, ತಿಳಿದಿರುವ ಎರಡು ಜೀವಗಳು ಸತಿಪತಿಗಳಾಗಿ ಸಪ್ತಪದಿ ಎಣಿಸುತ್ತಾರೆ. 

ಜೇನುಗಣ್ಣಿನ ಹುಡುಗಿ ಐಶ್ವರ್ಯಾ ರೈ, ಅಭಿಷೇಕ್‌ ಬಚ್ಚನ್‌ನನ್ನು ಮದುವೆಯಾದದ್ದು
ಐಶ್ವರ್ಯಾ ಹಾಗೂ ಅಭಿಷೇಕ್‌ ಬಚ್ಚನ್‌ರ ಮದುವೆಯ ವಿಚಾರವನ್ನು ವಿವರವಾಗಿ ವಿಶ್ಲೇಷಿಸಲಾರೆ. ವೈಯಕ್ತಿಕ ವಿಚಾರಗಳು ಇಲ್ಲಿ ಕಗ್ಗಂಟಾಗಿದೆ. ಅದೇನೇ ಇರಲಿ, ಐಶ್ವರ್ಯಾ ರೈ, ಬಚ್ಚನ್‌ ಕುಟುಂಬದ ಸೊಸೆಯಾದಳು. ಕರ್ನಾಟಕದ ಐಶ್ವರ್ಯಾ ಯಾರು? ಅಲಹಾಬಾದ್‌ ಮೂಲದ ಅಭಿಷೇಕ್‌ ಬಚ್ಚನ್‌ ಯಾರು? ಎತ್ತಣಿಂದೆತ್ತ ಸಂಬಂಧವಯ್ನಾ ಎಂಬ ಅಲ್ಲಮನ ಮಾತು ಇಲ್ಲಿ ನೆನಪಾಗದಿರದು. ಯಾರು ಸೋನಿಯಾ? ಯಾರು ರಾಜೀವ್‌ ಗಾಂಧಿ? ಆದರೂ ಅವರು ಸತಿಪತಿಗಳಾದರು. ಸ್ವತಃ ಸೋದರಮಾವನ, ಸೋದರತ್ತೆಯ ಮಕ್ಕಳು ಮದುವೆಯಾಗುತ್ತಾರೆ. ಇದೂ ಚೋದ್ಯವೇ. ಅಂತೂ ಸಲ್ಮಾನ್‌ ಖಾನ್‌ ಇನ್ನೂ ಒಬ್ಬ ಮಾತ್ರ ಅಧಿಕೃತ, ಅನೇಕ ಹುಡುಗಿಯರು ಮದುವೆಯಾಗಲು ಕಾತರದಲ್ಲಿರುವ ಬೇಡಿಕೆಯ ನಟ. ಸು#ರದ್ರೂಪಿ. ವಯಸ್ಸು ಈಗಾಗಲೇ 51 ನಿಜ. ಆದರೂ ಅವನನ್ನು ಮದುವೆಯಾಗಲು ಕ್ಯೂ ನಿಂತಿರುವವರಿಗೆ ಬರವಿಲ್ಲ. ಹೆಚ್ಚೇಕೆ, ನಮ್ಮ ರಾಹುಲ್‌ ಗಾಂಧಿ ಕೂಡ ಬಹುಬೇಡಿಕೆಯಲ್ಲಿರುವ ಯುವಕನೇ. ಇವರಿಗೆ ಈಗ 42 ವಯಸ್ಸು. 54 ವಯಸ್ಸಾದಾಗ ಖ್ಯಾತಿ ಪಡೆದ ಸಲ್ಮಾನ್‌ ರಷಿª ತನಗಿಂತ 33 ವರ್ಷ ಕಿರಿಯಳಾದ ಪದ್ಮಾಲಕ್ಷಿ$¾ಯನ್ನು ಮದುವೆಯಾಗಿದ್ದರು. ವಯೋವೃದ್ಧ ಎನ್‌.ಟಿ. ರಾಮರಾವ್‌, ತಮ್ಮ ಮಗಳ ವಯಸ್ಸಿನ ಲಕ್ಷಿ$¾ ಸರಸ್ವತಿ ಎಂಬ ಹೆಣ್ಣುಮಗಳನ್ನು ಆರಾಧಿಸಿದರು. ಇನ್ನಿಷ್ಟು ಹೆಸರುಗಳು, ರಾಜ್ಯದ, ಅನ್ಯರಾಜ್ಯದ ಹೆಚ್ಚಿನ ಪ್ರಮಾಣದಲ್ಲಿ ಹಾಲೀ ಚಾಲ್ತಿಯಲ್ಲಿನ ರಾಜಕಾರಣಿಗಳು, ಕಟ್ಟಿಕೊಂಡವರನ್ನು ಬಿಟ್ಟು ಇನ್ನೆಲ್ಲಿಗೋ ದಾರಿ ಮಾಡಿಕೊಂಡ ವ್ಯಕ್ತಿಗಳು… ಇತ್ಯಾದಿ ಇತ್ಯಾದಿ ಹೇಳುತ್ತ ಹೋದರೆ ಈ ಯಾದಿ ಮುಗಿಯುವುದೇ ಇಲ್ಲ. ಮೀನಾಕುಮಾರಿ, ನರ್ಗಿಸ್‌, ರೇಖಾ, ದೀಪಿಕಾ ಪಡುಕೋಣೆ, ಕರೀನಾ, ಅಜರುದ್ದೀನ್‌, ಫ್ರಾನ್ಸ್‌ ಅಧ್ಯಕ್ಷ ಸರ್ಕೋಜಿ, ಸೈಫ್ ಅಲಿ ಖಾನ್‌, ಮಾಜಿ ಕ್ರಿಕೆಟಿಗ ಸೌರವ್‌ ಗಂಗೂಲಿ, ಇವರೆಲ್ಲ ನೀಗಿಕೊಂಡ, ಬಾಳಸಂಗಾತಿಗಳ ವಿಷಯದಲ್ಲಿನ ತಳಮಳ ಗಮನಾರ್ಹ.

ಬದಲಾಗಿರುವ ಕಾಲ ಧರ್ಮ
“ಸಾವಿರ ಸುಳ್ಳು ಹೇಳಿ ಒಂದು ಲಗ್ನ ಮಾಡು’ ಎಂಬ ನಾಣ್ಣುಡಿ ನಮ್ಮಲ್ಲಿ ಚಾಲ್ತಿಯಲ್ಲಿದೆ. ಇದಕ್ಕೆ ಕಾರಣ ವಾಸ್ತವವಾಗಿ ಜಾತಕ ಕುಂಡಲಿಯನ್ನು ಹೊಂದಾಣಿಕೆ ಮಾಡಿ, ನೂರಕ್ಕೆ ನೂರು ಹೆಣ್ಣು ಗಂಡುಗಳು ಸತಿಪತಿಗಳಾಗುವಂತೆ ಜಾತಕ ಜೋಡಿಸುವುದೆಂದರೆ ನೂರರಲ್ಲಿ ಕೇವಲ 40ರಿಂದ 45 ಶೇಕಡಾ ಮಂದಿಗೆ ಮಾತ್ರ ಮದುವೆ ಯೋಗ, ಸಂಸಾರವನ್ನು ಶಾಂತಿಯುತವಾಗಿ ನಡೆಸಿಕೊಂಡು ಹೋಗುವ ಯೋಗ ಇರುತ್ತಿತ್ತು. ಉಳಿದಂತೆ ನೂರಕ್ಕೆ 55ರಿಂದ 60ರಷ್ಟು ಮಂದಿಗೆ ಹಿರಿಯರು, ದಲ್ಲಾಳಿಗಳು, ಇನ್ಯಾರೋ ಸಂಬಂಧಿಸಿದವರು ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡಲ್ಪಡುತ್ತಿತ್ತು. ನಂತರ ಅವರ ಹಣೆಬರಹ, ನಾವಂತೂ ಮಾಡಿದ್ದೇವೆ ಎಂದು ಹಿರಿಯರು ಕೈತೊಳೆದುಕೊಳ್ಳುತ್ತಿದ್ದರು.

Advertisement

ಇಂದು ಕಾಲ ಬದಲಾಗಿದೆ. ಸತಿಪತಿಯರಾದ ಮೇಲೆ ಬಹಳಷ್ಟು ದಾಂಪತ್ಯಗಳು ವಿಚ್ಛೇದನದಲ್ಲಿ ಅಂತ್ಯ ಕಾಣುತ್ತಿವೆ. ಸಾಮಾನ್ಯವಾಗಿ ಜಾತಕ ಕುಂಡಲಿಯಲ್ಲಿ ಬಾಳಸಂಗಾತಿಯ ಮನೆಯ ಅಧಿಪತಿ ಅಂದರೆ ಜಾತಕದಲ್ಲಿನ ಏಳನೇ ಮನೆ ಅಧಿಪತಿಯು ಪ್ರತಿಯೊಬ್ಬರ ಜಾತಕದಲ್ಲಿಯೂ ಮಾರಕ ಶಕ್ತಿ ಪಡೆದಿರುತ್ತಾನೆ. ಈ ಮಾರಕ ಶಕ್ತಿಯು ವಿಕೃತ ಸ್ವರೂಪಕ್ಕೆ ಸಂಬಂಧಿಸಿದ ವಿಚಾರ ಹೆಚ್ಚು ಬಲ ಪಡೆದಾಗ ದಾಂಪತ್ಯ ಕುಸಿಯುವ ಮಟ್ಟಕ್ಕೆ ಹೋಗುತ್ತಿರುತ್ತದೆ. ಹಿಂದಿನ ಸಮಾಜ ಹೆಣ್ಣನ್ನು ಅಬಲೆ ಎಂದು ಕರೆಯಿತು. ಇಂದು ಅಬಲೆ ಎಂಬ ವಿಚಾರ ನಿಧಾನವಾಗಿ ತನ್ನ ಅರ್ಥದ ವ್ಯಾಪ್ತಿಯನ್ನು ಮೀರಿ, ಸ್ವತಂತ್ರವಾಗಿ ತನ್ನನ್ನು ತಾನೇ ರಕ್ಷಿಸಿಕೊಳ್ಳುವ ವಿಚಾರಕ್ಕೆ ಕಾಲಿರಿಸಿದೆ. ಜಾತಕ ಕುಂಡಲಿಯಲ್ಲಿನ ಪ್ರೀತಿ, ಪ್ರೇಮದ, ಸತ್ಪತಿಗಳ ಸಂಬಂಧದ ಮಗ್ಗುಲುಗಳು ಹೊಸತೊಂದು ಆಯಾಮ ಸೃಷ್ಟಿಗೆ ಮುಂದಾಗಿವೆ. ಬದಲಾಗುತ್ತಿರುವ ಸಂಸ್ಕೃತಿಯ ಚೌಕಟ್ಟು ಸಂಸ್ಕಾರದ, ಉತ್ತಮ ಕುಟುಂಬ ವ್ಯವಸ್ತೆಯ ಬೇರುಗಳನ್ನು ಕಿತ್ತೆಸೆದಿದೆ. ಈಗಲೂ ಜಾತಕ ಕುಂಡಲಿಗಳ  ಸಂಯೋಜನೆ ಬೇರೆ ಬೇರೆ ಅಂಶಗಳ ನೆಲೆಯಲ್ಲಿ ಸಂಭವಿಸುವಂತಾದರೆ ಮುರಿದು ಬೀಳುತ್ತಿರುವ ಸಂಸಾರದ, ಕುಟುಂಬ ವ್ಯವಸ್ಥೆಯನ್ನು ಸರಿಪಡಿಸಬಹುದು. ಸಾವಿರ ಸುಳ್ಳುಗಳನ್ನು ಹೇಳಿ ಮದುವೆ ಮಾಡಬೇಕಾಗಿಲ್ಲ. ಮನಸ್ಸುಗಳ ಹೊಂದಾಣಿಕೆ ಮಾಡಲು ಜನ್ಮಕುಂಡಲಿಗಳ ಜೋಡಣೆಯೇ ರಾಮಬಾಣ. ಆದರೆ ಸರಿಯಾಗಿ ಆಗಬೇಕು. 

 ಅನಂತ ಶಾಸ್ತ್ರಿ 

Advertisement

Udayavani is now on Telegram. Click here to join our channel and stay updated with the latest news.

Next