Advertisement
ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಪ್ರಾರಂಭದ ದಿನವಾದ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು ಮತ್ತು ಅಭಿಮಾನಿಗಳನ್ನು ಉದ್ದೇಶಿಸಿ ಅಮೃತವರ್ಷಿಣಿ ಸಭಾಭವನದಲ್ಲಿ ಅವರು ಮಾತನಾಡಿದರು.
Related Articles
Advertisement
ಇತರ ಗಣ್ಯ ವ್ಯಕ್ತಿಗಳಂತೆ ತನಗೆ ಪೊಲೀಸ್ ರಕ್ಷಣೆ ಬೇಕಾಗಿಲ್ಲ. ತಾನು ಒಬ್ಬನೇ ಕಾರಿನಲ್ಲಿ ಪ್ರಯಾಣಿಸುತ್ತೇನೆ. ಂದೆ-ಮುಂದೆ ಪೊಲೀಸರು ಇರುವುದಿಲ್ಲ. ತನ್ನ ಭಕ್ತರು, ಶಿಷ್ಯರು ಮತ್ತು ಅಭಿಮಾನಿಗಳ ಪ್ರೀತಿ-ವಿಶ್ವಾಸ, ಭಕ್ತಿಯೇ ತನಗೆ ಶ್ರೀರಕ್ಷೆಯಾಗಿದೆ ಎಂದು ಹೆಗ್ಗಡೆಯವರು ಅಭಿಮಾನದಿಂದ ಹೇಳಿದರು.
ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಆಚರಣೆ ಸಂದರ್ಭದಲ್ಲಿ ತನಗೆ ಸಿ.ಎಂ., ಪಿ.ಎಂ. ಹಾಗೂ ಮೈಸೂರಿನ ರಾಜರಿಂದ ರಾಜ ಮರ್ಯಾದೆ, ಗೌರವ ಲಭಿಸಿದೆ. ಅಭಿಮಾನಿಗಳು ಪ್ರೀತಿ-ವಿಶ್ವಾಸ ಮತ್ತು ಭಕ್ತಿಯ ಮಹಾಪೂರವನ್ನೇ ಹರಿಸಿದ್ದಾರೆ. ಇದು ತನಗೆ ಅತೀವ ಸಂತೋಷ ಹಾಗೂ ನೆಮ್ಮದಿ ನೀಡಿದೆ ಎಂದು ಹೆಗ್ಗಡೆಯವರು ಹೇಳಿದರು.ಪ್ರಧಾನಿಯವರು ಧರ್ಮಸ್ಥಳಕ್ಕೆ ಬಂದಾಗ ಇಡೀ ದೇಶದಲ್ಲಿ ಪ್ರೀತಿ-ವಿಶ್ವಾಸ, ಶಾಂತಿ, ನೆಮ್ಮದಿ, ಸುಭಿಕ್ಷೆ ನೆಲೆಸಲಿ. ಶತ್ರುತ್ವ ದೂರವಾಗಿ ುತ್ರತ್ವ ಬೆಳೆಯಲಿ ಎಂದು ದೇವಸ್ಥಾನದಲ್ಲಿ ಪ್ರಧಾನಿಯವರ ಹೆಸರಿನಲ್ಲಿ ಸಂಕಲ್ಪ ಮಾಡಿ ಶತ ರುದ್ರಾಭಿಷೇಕ ಸೇವೆ ಸಲ್ಲಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.
ಸರ್ವರ ವತಿಯಿಂದ ಹೆಗ್ಗಡೆಯವರನ್ನು ಗೌರಸಿ ಸನ್ಮಾನಿಸಲಾಯಿತು. ಜಯರಾಘವ ಪಡ್ವೆಟ್ನಾಯ ಪ್ರಾಸ್ತಾಕವಾಗಿ ಮಾತನಾಡಿದರು. ವಕೀಲ ಪ್ರತಾಪಸಿಂಹ ನಾಯಕ್ ಸ್ವಾಗತಿಸಿ ಕೊನೆಯಲ್ಲಿ ಧನ್ಯವಾದವಿತ್ತರು. ಹೇಮಾವತಿ . ಹೆಗ್ಗಡೆ, ಡಿ. ಹಷೇìಂದ್ರ ಕುಮಾರ್, ಸುಪ್ರಿಯಾ ಹಷೇìಂದ್ರ ಕುಮಾರ್ ಮತ್ತು ಡಾ. ಬಿ. ಯಶೋವರ್ಮ ಉಪಸ್ಥಿತರಿದ್ದರು.