Advertisement

Love Matter: ಪ್ರೀತಿ ಮಾಡಿ 3 ತಿಂಗಳ ಹಿಂದೆ ಮದುವೆ ಆಗಿದ್ದ ಯುವತಿ ಸಾವು; ಕೊಲೆ ಆರೋಪ

10:54 AM Sep 09, 2023 | Team Udayavani |

ಮಹದೇವಪುರ: ಮೂರು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವ ವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕಾಡುಗೋಡಿಯಲ್ಲಿ ನೆಲೆಸಿದ್ದ ಮೈಸೂರು ಜಿಲ್ಲೆಯ ಸಾಲಿಗ್ರಾಮದ ಕೃಷ್ಣವೇಣಿ (26) ಅವರನ್ನು ಮೂರು ತಿಂಗಳ ಹಿಂದಷ್ಟೇ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್‌ನ ಪೃಥ್ವಿರಾಜ್‌ (30) ಎಂಬಾತನ ಜೊತೆಗೆ ಕುಟುಂಬಸ್ಥರು ಅದ್ಧೂರಿ ಯಾಗಿ ವಿವಾಹ ಮಾಡಿಕೊಟ್ಟಿದ್ದರು. ಪತಿ ಪೃಥ್ವಿರಾಜ್‌ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರೂ ಪ್ರೀತಿ ಮಾಡಿ ನಂತರ ಮದುವೆ ಆಗಿದ್ದರು. ಪ್ರೀತಿಯ ಮಗಳನ್ನು ಕಳೆದುಕೊಂಡ ಯುವತಿಯ ಪೋಷಕರು, ತಮ್ಮ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಅಳಿಯನ ಕುಟುಂಬಸ್ಥರ ವಿರುದ್ಧ ಆರೋಪ ಮಾಡಿದ್ದಾರೆ.

ಘಟನೆ ಸಂಬಂಧ ಕಾಡುಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮೃತದೇಹವನ್ನು ವೈದೇಹಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next