Advertisement

ಹುಡುಗಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯ: ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ

02:43 PM Nov 11, 2020 | keerthan |

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

Advertisement

ಮಲ್ಲಟ ಗ್ರಾಮದ ಮಹೇಶ (21) ಹಾಗೂ ಅಕ್ಷತಾ (18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಹುಡುಗಿಯ ಮನೆಯಲ್ಲಿ ಬೇರೆ ಯುವಕನ ಜತೆ ಮದುವೆ ನಿಶ್ಚಯ ಮಾಡಿದ್ದರಿಂದ ನೊಂದ ಪ್ರೇಮಿಗಳು ಗ್ರಾಮದ ಹೊರವಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ರಾಜ್ಯದ ‘ಆರೋಗ್ಯ ಸಚಿವ’ರಿಗೆ ಹಸಿರು ಪಟಾಕಿ ಎಂದರೇನೆಂದು ಗೊತ್ತಿಲ್ಲವಂತೆ!

ಸ್ಥಳಕ್ಕೆ ಪಿಎಸ್‌ಐ ಸುಜಾತ ನಾಯಕ ಭೇಟಿ ನೀಡಿದ್ದು, ಈ ಕುರಿತು ಸಿರವಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next