Advertisement

ತುಂಗಾ ನದಿಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ ; ಯುವತಿ ಆಸ್ಪತ್ರೆಯಲ್ಲಿ ಸಾವು

05:47 PM Aug 14, 2020 | keerthan |

ಶಿವಮೊಗ್ಗ: ಇಲ್ಲಿನ ಬೈಪಾಸ್ ರಸ್ತೆಯ ಸೇತುವೆಯಿಂದ ಪ್ರೇಮಿಗಳಿಬ್ಬರು ತುಂಗಾ ನದಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement

ಹುರುಳಿ ಹಳ್ಳಿ ಗ್ರಾಮದ ಸಂತೋಷ್ (25) ಹಾಗೂ ಕಾಕನಹಸುಡಿ ಗ್ರಾಮದ ಅನುಷಾ (20) ಅವರೇ ಆತ್ಮಹತ್ಯೆಗೆ ಶರಣಾಗಿರುವವರೆಂದು ತಿಳಿದುಬಂದಿದೆ.

ಪ್ರೇಮಿಗಳಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ನಗರದಲ್ಲಿರುವ ವಿಧಾತ್ರಿ ಭವನ ಹೊಟೇಲ್ ನಲ್ಲಿ ಸಂತೋಷ ಕೆಲಸಮಾಡುತ್ತಿದ್ದ. ಅನುಷಾ ಇತ್ತೀಚೆಗಷ್ಟೇ ಪಿ.ಯು. ಶಿಕ್ಷಣವನ್ನು ಮುಗಿಸಿದ್ದಳು. ಇವರಿಬ್ಬರು ಕೆಲವು ಸಮಯಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಇಂದು ಮಧ್ಯಾಹ್ನದ ಸಮಯದಲ್ಲಿ ಇವರಿಬ್ಬರು ಇದ್ದಕ್ಕಿದ್ದಂತೆಯೇ ತುಂಗಾ ನದಿಗೆ ಹಾರಿದ್ದಾರೆ, ಕೂಡಲೇ ಸ್ಥಳದಲ್ಲಿದ್ದವರು ನದಿಗೆ ಧುಮುಕಿ ಅನುಷಾಳನ್ನು ರಕ್ಷಿಸಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

Advertisement

ಸಂತೋಷ್ ಶವಕ್ಕಾಗಿ ತುಂಗಾ ನದಿಯಲ್ಲಿ ಹುಡುಕಾಟ ಮುಂದುವರೆದಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next