Advertisement

ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು !

07:50 PM Aug 13, 2021 | Team Udayavani |

ಯಳಂದೂರು : ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಶುಕ್ರವಾರ ಸಂಜೆ ನಡೆದಿದೆ .

Advertisement

ಮಾಂಬಳ್ಳಿ ಕಿನಕಹಳ್ಳಿ ಗ್ರಾಮದ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ . ಮಾಂಬಳ್ಳಿ ಗ್ರಾಮದ ಕಾಂಚನ ( 20 ) ಹಾಗೂ ಶ್ರೀನಿವಾಸ್ ( 23 ) ಎಂಬುವರೇ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ದುರ್ದೈವಿಗಳಾಗಿದ್ದಾರೆ .

ಕಳೆದ ಹಲವು ವರ್ಷಗಳಿಂದಲೂ ಇವರಿಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ . ಕಾಂಚನ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು . ಶ್ರೀನಿವಾಸ್ ಡ್ರೈವರ್ ಆಗಿದ್ದರು ಎನ್ನಲಾಗಿದೆ . ಇವರಿಬ್ಬರೂ ಇಂಡಿಕಾ ಕಾರಿನಲ್ಲಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ .

ಇದನ್ನೂ ಓದಿ:ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಡಿಯೋಗ ಸಿದ್ದಿ ಇನ್ನಿಲ್ಲ

ಸ್ಥಳಕ್ಕೆ ಆಗಮಿಸಿರುವ ಪೊಲೀಸರ ತಂಡ ಪರಿಶೀಲನೆ ನಡೆಸಿದ್ದು ಈ ಬಗ್ಗೆ ಅಗರ  ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮವನ್ನು ವಹಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next