Advertisement

LS Election; ಬನ್ನಿ… ಸಿಎಂ ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲು ಹಾಕಿದ ಜಿಟಿಡಿ !

10:58 AM Apr 03, 2024 | Team Udayavani |

ಮೈಸೂರು: ”ವರುಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ನೀವು ರಾಜೀನಾಮೆ ಕೊಡಿ, ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡುತ್ತೇನೆ. ಬನ್ನಿ ಇಬ್ಬರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆ ಗೆ ನಿಲ್ಲೋಣ,ಯಾರು ಗೆಲುತ್ತಾರೆ ನೋಡೋಣ” ಎಂದು ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡ ಅವರು CM ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

Advertisement

ಜಿ.ಟಿ. ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಏನು ಕಡಿದು ಕಟ್ಟೆ ಹಾಕಿದ್ದಾರೆ ಎಂಬ ಸಿಎಂ ಮಾತಿಗೆ ಕೆಂಡಮಂಡಲರಾದ ಜಿಟಿಡಿ,’ಸಿದ್ದರಾಮಯ್ಯ ಅವರಿಗೆ ಅಭಿವೃದ್ಧಿ ಅಂದರೆ ಏನೂ ಅಂತಾ ಗೊತ್ತಿಲ್ಲ.ಅಭಿವೃದ್ಧಿ ಮಾಡದೆ ರಾಜಕೀಯದಲ್ಲಿ ಬೆಳೆದಿದ್ದು ಅಂದರೆ ಅದು ಸಿದ್ದರಾಮಯ್ಯ ಮಾತ್ರ. ಚಾಮುಂಡೇಶ್ವರಿ ಕ್ಷೇತ್ರಕ್ಕೆ ನೀವು ಮಾಡಿದ ಅಭಿವೃದ್ಧಿ ಕಾರ್ಯದ ಶ್ವೇತ ಪತ್ರ ಹೊರಡಿಸಿ.ಚಾಮುಂಡೇಶ್ವರಿ ಉಪ ಉಪ ಚುನಾವಣೆ ವೇಳೆ ನಾನು ಜೆಡಿಎಸ್ ಪರ ಪ್ರಚಾರಕ್ಕೆ ಹೋಗಲಿಲ್ಲ. ಅದಕ್ಕಾಗಿ ಆಗ ನೀವು ಗೆದ್ದದ್ದು’ ಎಂದರು.

’35 ಸಾವಿರದಿಂದ ನಾನು ನಿಮ್ಮನ್ನು ಸೋಲಿಸಿದ್ದಾಗಲೂ ನಿಮ್ಮ ಬಗ್ಗೆ ಅಗೌರವದಿಂದ ಮಾತಾಡಿಲ್ಲ.ಹೆಸರಿಗೆ ನಾನು ಶಾಸಕ. ಚಾಮುಂಡೇಶ್ವರಿಯಲ್ಲಿ ಎಲ್ಲಾ ನಿಮ್ಮದೆ. ಗುತ್ತಿಗೆದಾರರು ಕಮೀಷನ್ ಅನ್ನು ನಿಮ್ಮ ಪುತ್ರನಿಗೆ ಕೊಡಬೇಕು.ಯತೀಂದ್ರ ನಮ್ಮ‌ ಕ್ಷೇತ್ರದಲ್ಲಿಕಮಿಷನ್ ದಂಧೆ ಮಾಡುತ್ತಿದ್ದಾರೆ.60% ಸರಕಾರ ಇದು. ವರುಣದಲ್ಲಿ ನೀವು ಬಿಜೆಪಿಯ ದೊಡ್ಡವರ ಬೆಂಬಲ ಪಡೆದು ಗೆದ್ದಿಲ್ಲವೇ’ ಎಂದು ಕಿಡಿ ಕಾರಿದರು.

ನನ್ನನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಲು ಎಷ್ಟು ಸಲ ಪ್ರಯತ್ನ ಪಟ್ಟಿರಿ, ನನ್ನ ಕಾಯೋಕೆ ದೈವ ಇಲ್ವ, ಧರ್ಮ ಇಲ್ವ. ಅದು ಹೇಗೆ ಸೋಲಿಸುತ್ತೀರಿ ನೀವು ನನ್ನನ್ನು ಎಂದು ಸವಾಲೆಸೆದರು.

ನೀವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಮೇಲೆ ಮುಗಿದು ಹೋಯಿತು. ಯಾಕೆ ಪದೇ ಪದೇ ಹೀಗೆ ಮಾತಾಡುತ್ತೀರಿ? ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ಬಿಇಒ, ತಹಶಿಲ್ದಾರರು ಎಲ್ಲಾ ಸಿಎಂ ಬಂಧುಗಳೆ . ಎಷ್ಟು ದಿನ ಸಿಎಂ ಆಗಿ ಇರುತ್ತೀರಿ? ಎಷ್ಟು ದಿನ ಅಧಿಕಾರದಲ್ಲಿಇರುತ್ತೀರಿ ನೋಡೋಣ. ಎಷ್ಟು ನೋವು ಕೊಡುತ್ತಾ ಇದ್ದೀರಿ ನೀವು ನನಗೆ. ಪದೇ ಪದೇ ಬಂದು ಯಾಕೆ ರೀತಿ ಚುಚ್ಚಿ ಮಾತಾಡುತ್ತೀರಿ? ಎಂದು ಪ್ರಶ್ನಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next