Advertisement

Ramanagara: ಜೆಡಿಎಸ್ ಗೆ ಶಾಕ್; 9 ಮಂದಿ ಸದಸ್ಯರು ಕಾಂಗ್ರೆಸ್ ಸೇರ್ಪಡೆ

07:59 AM Apr 05, 2024 | Team Udayavani |

ರಾಮನಗರ: ಲೋಕಚುನಾವಣೆ ಸಮಯದಲ್ಲಿ ಜೆಡಿಎಸ್ ಗೆ ಕಾಂಗ್ರೆಸ್ ಶಾಕ್ ನೀಡಿದೆ. ಜೆಡಿಎಸ್ ನ 9 ಮಂದಿ ಚನ್ನಪಟ್ಟಣ ನಗರಸಭಾ ಸದಸ್ಯರನ್ನು ಡಿಕೆಶಿ ಆಪರೇಷನ್ ಮಾಡಿದ್ದಾರೆ.

Advertisement

ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ. ಸೇರಿದಂತೆ 9 ಮಂದಿ ಜೆಡಿಎಸ್ ಸದಸ್ಯರು ಜೆಡಿಎಸ್ ಪಕ್ಷವನ್ನು ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಎಂಎಲ್ಸಿ ಪುಟ್ಟಣ್ಣ ಅವರ ಸಮ್ಮುಖದಲ್ಲಿ ಗುರುವಾರ ರಾತ್ರಿ ಸದಾಶಿವನಗರದಲ್ಲಿರುವ ಶಿವಕುಮಾರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇವರ ಜತೆಗೆ ಪಕ್ಷೇತರ ಸದಸ್ಯೆ ಉಮಾ ಅವರೂ ಕಾಂಗ್ರೆಸ್ ಸೇರಿದರು.

ಚನ್ನಪಟ್ಟಣ ನಗರಸಭೆಯ ಒಟ್ಟು ಜೆಡಿಎಸ್ ಸದಸ್ಯರ ಪೈಕಿ ಮೂರನೇ ಒಂದರಷ್ಟು ಮಂದಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ತಮ್ಮನ್ನು ಕಾಂಗ್ರೆಸ್ ಸದಸ್ಯರೆಂದು ಪರಿಗಣಿಸಿ ನಗರಸಭೆಯಲ್ಲಿ ತಮಗೆ ಕಾಂಗ್ರೆಸ್ ಸದಸ್ಯರ ಜತೆ ಕೂರಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕೋರಿದ್ದಾರೆ.

ರೇವಣ್ಣ ಎಂ.ಜೆ., ಎ. ಸತೀಶ್ ಬಾಬು, ಶ್ರೀನಿವಾಸಮೂರ್ತಿ, ಲೋಕೇಶ್ ಸಿ.ಜೆ., ನಾಗೇಶ್, ಸಯ್ಯದ್ ರಫೀಕ್ ಅಹ್ಮದ್ ಕುನುಮೀರಿ, ಅಭಿದಾಬಾನು, ಭಾನುಪ್ರಿಯಾ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಸದಸ್ಯರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next