Advertisement

Lucknow: ಮನೆ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸೇರಿ ಐವರು ಸಾವು

12:05 PM Sep 16, 2023 | Team Udayavani |

ಲಕ್ನೋ: ಮನೆಯೊಂದರ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ಶನಿವಾರ ಮುಂಜಾನೆ ನಡೆದಿದೆ.

Advertisement

ಲಕ್ನೋದ ಆನಂದ್ ನಗರ ಪ್ರದೇಶದಲ್ಲಿರುವ ದಶಕಗಳಷ್ಟು ಹಳೆಯದಾದ ರೈಲ್ವೇ ಕಾಲೋನಿಯಲ್ಲಿ ಈ ದುರಂತ ಘಟನೆ ನಡೆದಿದೆ. ಮಾಹಿತಿ ಪಡೆದ ಕೂಡಲೇ ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್‌ಡಿಆರ್‌ಎಫ್) ಮತ್ತು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮೃತರನ್ನು ಸತೀಶ್ ಚಂದ್ರ (40), ಸರೋಜಿನಿ ದೇವಿ (35) ಮತ್ತು ಮೂವರು ಅಪ್ರಾಪ್ತರು ಎಂದು ಗುರುತಿಸಲಾಗಿದೆ.

ಕುಟುಂಬ ಸದಸ್ಯರನ್ನು ಅವಶೇಷಗಳಿಂದ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ದುರದೃಷ್ಟವಶಾತ್, ಅವರು ಸಾವನ್ನಪ್ಪಿದ್ದಾರೆಂದು ವೈದ್ಯರು ಘೋಷಿಸಿದರು ಎಂದು ಪೂರ್ವ ಡಿಸಿಪಿ ಹೃದೇಶ್ ಕುಮಾರ್ ಹೇಳಿದ್ದಾರೆ.

Advertisement

ಆನಂದನಗರ ಪ್ರದೇಶದ ಹಳೆ ರೈಲ್ವೆ ಕಾಲೋನಿಯಲ್ಲಿ ಮನೆಯ ಮೇಲ್ಛಾವಣಿ ಕುಸಿದಿದೆ. ಕುಟುಂಬದ ಐವರನ್ನು ಅವಶೇಷಗಳಿಂದ ರಕ್ಷಿಸಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಡಿಸಿಪಿ ಕುಮಾರ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next