Advertisement

Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್‌ ವಿರುದ್ಧ ಶಿಸ್ತು ಕ್ರಮ?

10:59 PM Jul 07, 2024 | Team Udayavani |

ಕೋಲ್ಕತಾ: ಪಶ್ಚಿಮ ಬಂಗಾಳ ರಾಜ್ಯಪಾಲರ ಕಚೇರಿ ವಿರುದ್ಧ ಸುಳ್ಳು ಸುದ್ದಿಗೆ ಉತ್ತೇಜನ ನೀಡಿದ ಕೋಲ್ಕತಾ ಪೊಲೀಸ್‌ ಕಮಿಷನರ್‌ ಮತ್ತು ಉಪ ಪೊಲೀಸ್‌ ಆಯುಕ್ತರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಯನ್ನು ಕೇಂದ್ರ ಗೃಹ ಸಚಿವಾಲಯವು ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಈ ಇಬ್ಬರು ಅಧಿಕಾರಿಗಳ ವಿರುದ್ಧ ಪ.ಬಂಗಾಳ ರಾಜ್ಯಪಾಲ ಸಿ.ವಿ.ಆನಂದ್‌ ವರದಿ ಸಲ್ಲಿಸಿ, ಅವರ ಕಾರ್ಯ ನಿರ್ವಹಣೆ ಸಂಪೂರ್ಣವಾಗಿ ಸಾರ್ವಜನಿಕ ಸೇವೆಗೆ ವಿರುದ್ಧವಾಗಿದೆ ಎಂದಿದ್ದರು. ಈ ವರದಿ ಅನ್ವಯವೇ ಈ ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ರಾಜ್ಯಪಾಲರ ವಿರುದ್ಧ 2024ರ ಮೇ ತಿಂಗಳಲ್ಲಿ ಮಹಿಳಾ ಸಿಬ್ಬಂದಿ ಹೊರಿಸಿದ ಸುಳ್ಳು ಆರೋಪಗಳಿಗೆ ಪೊಲೀಸ್‌ ಅಧಿಕಾರಿಗಳು ಉತ್ತೇಜನ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next