Advertisement

ಎಂ.ಬಿ. ಪಾಟೀಲ್‌ಗೆ ಸಚಿವ ಸ್ಥಾನವೇ ಬೇಕು!

06:34 AM May 31, 2019 | Team Udayavani |

ಬೆಂಗಳೂರು: ಸಂಪುಟದಿಂದ ಕೈ ಬಿಟ್ಟು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಬೇಕೆಂಬ ರಾಜ್ಯ ಕಾಂಗ್ರೆಸ್‌ ನಾಯಕರ ಕೋರಿಕೆಗೆ ಗೃಹ ಸಚಿವ ಎಂ.ಬಿ.ಪಾಟೀಲ್‌ ನಿರಾಕರಿಸಿದ್ದಾರೆ.

Advertisement

ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಅತೃಪ್ತರಿಗೆ ಸಂಪುಟದಲ್ಲಿ ಸ್ಥಾನ ನೀಡಲು ಕೆಲವು ಹಿರಿಯ ಸಚಿವರನ್ನು ಸಂಪುಟದಿಂದ ಕೈ ಬಿಡಲು ರಾಜ್ಯ ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದ್ದರು. ಅದರಂತೆ ಗೃಹ ಸಚಿವ ಎಂ.ಬಿ.ಪಾಟೀಲರನ್ನು ಸಂಪುಟದಿಂದ ಕೈ ಬಿಟ್ಟು ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿ ವಹಿಸಿಕೊಳ್ಳುವಂತೆ ಸೂಚನೆ ನೀಡಿದ್ದರು ಎಂದು ಹೇಳಲಾಗುತ್ತಿದೆ.

ಆದರೆ, ಸದ್ಯ ಪಕ್ಷದ ಜವಾಬ್ದಾರಿ ಹೊತ್ತುಕೊಳ್ಳಲು ಎಂ.ಬಿ.ಪಾಟೀಲ್‌ ಹಿಂದೇಟು ಹಾಕಿದ್ದಾರೆ ಎನ್ನಲಾಗಿದ್ದು, ತಾವು ಹಿಂದಿನ ಸರ್ಕಾರದಲ್ಲಿ ಹೊಂದಿದ್ದ ಜಲ ಸಂಪನ್ಮೂಲ ಖಾತೆ ನೀಡುವಂತೆ ಪಕ್ಷದ ನಾಯಕರಲ್ಲಿ ಮನವಿ ಮಾಡಿದ್ದಾರೆ.

ಒಂದು ವೇಳೆ ಸಂಪುಟದಿಂದ ಕೈ ಬಿಟ್ಟರೆ ಶಾಸಕನಾಗಿ ಮುಂದುವರೆಯುತ್ತೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಸದ್ಯಕ್ಕೆ ಬೇಡ ಎಂದು ಪಕ್ಷದ ನಾಯಕರಿಗೆ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next