Advertisement

ರಾಮಲಿಂಗಾರೆಡ್ಡಿ ಹೇಳಿಕೆಗೆ ಎಂ.ಬಿ.ಪಾಟೀಲ ಸಹಮತ

10:45 PM Jun 04, 2019 | Team Udayavani |

ವಿಜಯಪುರ: “ಪಕ್ಷದ ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ ಅನುಭವಿಗಳು, ಅವರು ಏನೇ ಹೇಳಿಕೆ ನೀಡಿದರೂ ಜವಾಬ್ದಾರಿಯಿಂದ ನೀಡಿರುತ್ತಾರೆ. ಅವರ ಹೇಳಿಕೆ, ಸಲಹೆ-ಸೂಚನೆಗಳನ್ನು ಕಾಂಗ್ರೆಸ್‌ ಹೈಕಮಾಂಡ್‌ ಗಂಭೀರವಾಗಿ ತೆಗೆದುಕೊಳ್ಳಬೇಕು’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್‌ ಜತೆ ಹೊಂದಾಣಿಕೆ ಕಾರಣದಿಂದಾಗಿ ಕಾಂಗ್ರೆಸ್‌, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೀನಾಯ ಸೋಲು ಕಂಡಿದೆ ಎಂಬ ರಾಮಲಿಂಗಾರೆಡ್ಡಿ ಹೇಳಿಕೆ ಅವರ ವೈಯಕ್ತಿಕ. ಪ್ರತಿಯೊಬ್ಬರಿಗೂ ಅವರದೇ ಆದ ಅಭಿಪ್ರಾಯವಿರುತ್ತದೆ. ಒಬ್ಬೊಬ್ಬರ ಹೇಳಿಕೆ, ಅಭಿಪ್ರಾಯಗಳೂ ಬೇರೆಯಾಗಿರುತ್ತವೆ.

ಆದರೆ ಮೈತ್ರಿ ಸರ್ಕಾರ ಇನ್ನೂ ಚುರುಕಾಗಿ ಕೆಲಸ ಮಾಡಬೇಕಿದೆ ಎಂಬುದನ್ನು ನಾನೂ ಒಪ್ಪುತ್ತೇನೆ. ಜೆಡಿಎಸ್‌ ಜತೆಗಿನ ಮೈತ್ರಿ ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೂ ನೋವಾಗಬಾರದು. ಈ ಅವ ಧಿ ಮುಗಿದ ಮೇಲೆ ಕಾಂಗ್ರೆಸ್‌ ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕಿದೆ. ಹೀಗಾಗಿ ಪಕ್ಷ ಸಂಘಟನೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next