Advertisement

ಸಂಪುಟದಲ್ಲಿ ಹೊಸಬರಿಗೆ ಅವಕಾಶ ಕೊಡಬೇಕಿತ್ತು: ರೇಣುಕಾಚಾರ್ಯ

09:14 PM Jul 07, 2022 | Team Udayavani |

ಬೆಂಗಳೂರು: ಶಾಸಕರಾರು ಸನ್ಯಾಸಿಗಳಲ್ಲಾ, ಸಚಿವರಾಗಬೇಕೆನ್ನುವ ಆಸೆ ಇರುತ್ತದೆ. ಆದರೆ, ಈಗ ಚುನಾವಣೆ ಹತ್ತಿರ ಇರುವುದರಿಂದ ಕ್ಷೇತ್ರದಲ್ಲಿ ಇರುವುದು ಮುಖ್ಯವಾಗಿರುವುದರಿಂದ ಶಾಸಕರು ಆಸಕ್ತಿ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

Advertisement

ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವಿಳಂಬ ಆಗಿರುವುದು ನಿಜ. ಹೊಸಬರಿಗೆ ಸಚಿವರಾಗಿ ಕೆಲಸ ಮಾಡಲು ಅವಕಾಶ ಸಿಗಬೇಕಿತ್ತು. ಒಬ್ಬರಿಗೆ ಎರಡು ಮೂರು ಖಾತೆಗಳ ಜವಾಬ್ದಾರಿ ನೀಡಿದ್ದಾರೆ. ಅದನ್ನು ಬದಲಾಯಿಸಬಹುದಿತ್ತು. ವಯಕ್ತಿಕವಾಗಿ ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಒಂದಿಬ್ಬರು ಸಚಿವರು ಕೆಲಸ ಮಾಡದಿದ್ದರೆ ಸರ್ಕಾರ ಮತ್ತು ಸಂಘಟನೆಯ ಮೇಲೆ ವ್ಯತ್ಯಾಸ ಆಗುವುದಿಲ್ಲ. ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಸರಿಯಾಗಿ ಕೆಲಸ ಮಾಡದ ಸಚಿವರಿಗೆ ಮುಂದೆ ತೊಂದರೆಯಾಗಲಿದೆ. ಎಲ್ಲವನ್ನೂ ಹೈಕಮಾಂಡ್‌ ಗಮನಿಸುತ್ತಿದೆ ಎಂದು ಹೇಳಿದರು.

ಇದೇ ವೇಳೆ, ಪಿಎಸ್‌ಐ ಹಗರಣದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾವೆ ಕೇಳಲು ಕಾಂಗ್ರೆಸ್‌ಗೆ ನೈತಿಕತೆ ಇಲ್ಲ. ಸಿದ್ದರಾಮಯ್ಯ ಅವರ ಕಾಲದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ. ಹಾಸಿಗೆ ದಿಂಬು ಹಗರಣ, ರೀಡು ಹಗರಣ ಸಾಲು ಸಾಲು ಭ್ರಷ್ಟಾಚಾರ ನಡೆದಿವೆ. ಈಗ ಬೊಮ್ಮಾಯಿಯವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next