Advertisement
ನಗರದಲ್ಲಿ ಸೋಮವಾರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಪದ್ಮನಾಭನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ಶ್ರೀನಿವಾಸ್ ಸ್ಪರ್ಧೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 10ನೇ ವರ್ಷ ವಯಸ್ಸಿನಿಂದ ನಾನು ಬಿಜೆಪಿಯಲ್ಲಿದ್ದು, ಶ್ರೀನಿವಾಸ್ ಅವರು ನಮ್ಮ ಪಕ್ಷಕ್ಕೆ ಬಂದು ಹೋಗಿದ್ದಾರೆ.
Related Articles
Advertisement
ಪಕ್ಷ ಸೇರ್ಪಡೆ: ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ.ಅಪ್ಪಾಜಿಗೌಡ, ಮಾಜಿ ಸಚಿವ ದಿವಂಗತ ಎಸ್.ರಮೇಶ್ ಪುತ್ರ ಪವನ್, ಅಗ್ರಹಾರ ದಾಸರಹಳ್ಳಿಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಮೇಶ್, ಗೋವಿಂದರಾಜನಗರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಮಣ್ಣ ಸೋಮವಾರ ಬಿಜೆಪಿ ಸೇರ್ಪಡೆಯಾದರು.
ಕೇಂದ್ರ ಸಚಿವ ಅನಂತಕುಮಾರ್, ಮಾಜಿ ಸಚಿವ ವಿ.ಸೋಮಣ್ಣ ಅವರು ಮುಖಂಡರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಬಳಿಕ ಮಾತನಾಡಿದ ಆರ್.ಅಶೋಕ, ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಪೂರಕವಾದ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದ್ದು, ಮೂರ್ನಾಲ್ಕು ದಿನದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಹೇಡಿತನದ ಪ್ರದರ್ಶನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿರುವುದು ಹೇಡಿತನದ ಪ್ರದರ್ಶನ. ತವರು ಜಿಲ್ಲೆಯಲ್ಲೇ ತಮಗೆ ಬೆಂಬಲವಿಲ್ಲ ಎಂಬುದನ್ನು ತೋರಿಸಿಕೊಳ್ಳುವ ಮೂಲಕ ನಗೆಪಾಟಿಲಿನ ಸ್ಥಿತಿಗೆ ತಲುಪಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಕಾಂಗ್ರೆಸ್ ಮುಕ್ತವಾಗಲು ಮುಖ್ಯಮಂತ್ರಿ ನಾಂದಿ ಹಾಡಿದ್ದಾರೆ ಎಂದು ಆರ್.ಅಶೋಕ ಮಾರ್ಮಿಕವಾಗಿ ನುಡಿದರು.