Advertisement

ಮಾಡಾಳು ವಿರೂಪಾಕ್ಷಪ್ಪ ಉಚ್ಚಾಟನೆಯೋ, ವದಂತಿಯೋ?

11:57 PM Mar 07, 2023 | Team Udayavani |

ಬೆಂಗಳೂರು: ಲೋಕಾಯುಕ್ತ ಪ್ರಕರಣದಲ್ಲಿ ಮಧ್ಯಾಂತರ ನಿರೀಕ್ಷಣ ಜಾಮೀನು ಲಭ್ಯವಾದ ಬೆನ್ನಲ್ಲೇ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂಬ ವದಂತಿ ಹಬ್ಬಿದ್ದು, ಬಿಜೆಪಿ ಹಿರಿಯ ನಾಯಕರು ಈ ಸಂಗತಿಯನ್ನು ದೃಢಪಡಿಸಿಲ್ಲ.

Advertisement

ಘಟನೆ ನಡೆದ ಮರು ದಿನದಿಂದಲೂ ಮಾಡಾಳು ಉಚ್ಚಾಟನೆ ಬಗ್ಗೆ ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಲೇ ಇದೆ. ಇದಕ್ಕೆ ಪೂರಕ ಎಂಬಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಕೇಂದ್ರ ಸಂಸದೀಯ ಮಂಡಳಿಗೆ ವರದಿ ಕಳುಹಿಸಲಾಗುವುದು, ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದರು.

ಪಕ್ಷ ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಂಡರೆ ಸ್ವಾಗತಿಸುತ್ತೇನೆ ಎಂದು ಮಾಡಾಳು ಹೇಳಿಕೆ ನೀಡಿದ್ದಾರೆ.

ವಿರೂಪಾಕ್ಷಪ್ಪ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಬಗ್ಗೆ ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ. ಇದುವರೆಗೆ ಉಚ್ಚಾಟನೆ ಬಗ್ಗೆ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next