Advertisement

Madenoor Manu; ಕೇದಾರ್‌ನಾಥ್‌ ಕುರಿ ಫಾರಂ!: ಗ್ರಾಮೀಣ ಸೊಗಡಿನ ಚಿತ್ರವಿದು

03:58 PM Aug 10, 2024 | Team Udayavani |

ಸಿನಿಮಾಗಳ ಟೈಟಲ್‌ ವಿಭಿನ್ನವಾಗಿದ್ದರೆ ಜನರ ಗಮನವನ್ನು ಬೇಗನೇ ಸೆಳೆಯಬಹುದು ಎಂಬ ಕಾರಣಕ್ಕೆ ಈಗ ಭಿನ್ನ-ವಿಭಿನ್ನ ಟೈಟಲ್‌ನ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ “ಕೇದಾರ್‌ನಾಥ್‌ ಕುರಿ ಫಾರಂ’. ಹೀಗೊಂದು ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ.

Advertisement

ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಹಾಗೂ ಹಾಡುಗಳು ಬಿಡುಗಡೆಯಾದವು. ಶೀನು ಸಾಗರ್‌ ಈ ಚಿತ್ರದ ನಿರ್ದೇಶಕ. ಚಿತ್ರದ ಬಗ್ಗೆ ಮಾತನಾಡುವ ಶೀನು, “ನಿರ್ದೇಶಕನಾಗಿ ಇದು ಎರಡನೇ ಚಿತ್ರ. ನಾನು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ಇದು ಪಕ್ಕಾ ಗ್ರಾಮೀಣ ಸೊಗಡಿನ ಸಿನಿಮಾ. ಕಾಮಿಡಿ ಥ್ರಿಲ್ಲರ್‌ ಜಾನರ್‌ನ ಕಥಾ ಹಂದರ ಹೊಂದಿರುವ ಚಿತ್ರ. ಮಡೆನೂರ್‌ ಮನು ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ’ ಎಂದರು.

“ಕಾಲೇಜ್‌ ಕುಮಾರ, ಜಾನ್‌ ಜಾನಿ ಜನಾರ್ದನ್‌ ಚಿತ್ರಗಳಿಗೆ ಸಹ ನಿರ್ಮಾಪಕನಾಗಿದ್ದೆ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ನಾಯಕಿಯ ತಂದೆಯ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ’ಎಂದರು ನಿರ್ಮಾಪಕ ನಟರಾಜ.

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ನಂತರ ನಾನು ನಟಿಸಿರುವ ಮೊದಲ ಚಿತ್ರವಿದು. ಹಳ್ಳಿ ಸೊಗಡಿನ ಈ ಚಿತ್ರದಲ್ಲಿ ಮನರಂಜನೆಗೆ ಬರವಿಲ್ಲ. ಮಂಜು ನನ್ನ ಪಾತ್ರದ ಹೆಸರು ಎಂದು ಮಡೆನೂರ್‌ ಮನು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next