Advertisement

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

11:13 PM May 18, 2024 | Team Udayavani |

ಚಿಕ್ಕಮಗಳೂರು: ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಪ್ರಮುಖ ಅಂಶಗಳನ್ನು ಮರೆತು ಏನೇನೋ ಮಾತನಾಡುತ್ತಾರೆ. ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎಂಬ ಬಗ್ಗೆಯೂ ಈ ಸಂದರ್ಭದಲ್ಲಿ ಯೋಚಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ಗೆ ಸಂಬಂಧಿಸಿದಂತೆ 100 ಕೋಟಿ ಆಫರ್‌ ನೀಡಿರುವ ಕುರಿತು ವಕೀಲ ದೇವರಾಜೇಗೌಡ ಆರೋಪಿಸಿದ್ದಾರೆ. ಆರೋಪ ಮಾಡಿದವರು ಈಗ ಎಲ್ಲಿದ್ದಾರೆ. ಅವರು, ಯಾವ ಸ್ಥಿತಿಯಲ್ಲಿದ್ದಾರೆ. ಎಸ್‌ಐಟಿ ತನಿಖೆ ನಡೆಯುತ್ತಿದೆ. ಸರಕಾರ ನೋಡಿಕೊಳ್ಳಲಿದೆ. ಆರೋಪ ಮಾಡುವ ಮೊದಲು ದೂರು ನೀಡಲಿ. ಆರೋಪ ಮಾಡುವ ವ್ಯಕ್ತಿ ಯಾರ ಕಸ್ಟಡಿಯಲ್ಲಿದ್ದಾರೆ ಎಂದು ಮರು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next