Advertisement

ಸಿದ್ದರಾಮಯ್ಯ ಭೇಟಿಯಾದ ಮಧು ಬಂಗಾರಪ್ಪ: ಕಾಂಗ್ರೆಸ್ ಸೇರ್ಪಡೆ ಸನ್ನಿಹಿತ

12:26 PM Mar 11, 2021 | Team Udayavani |

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿರುವ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರು ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Advertisement

ಬೆಂಗಳೂರಿನ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ಮಾಡಿದ ಮಧೂ ಬಂಗಾರಪ್ಪ, ಕೆಲ ಕಾಲ ಸಮಾಲೋಚನೆ ನಡೆಸಿದರು. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ:ಪಶ್ಚಿಮ ಬಂಗಾಳ : ಮಮತಾ ಮೇಲೆ ನಡೆದಿದ್ದು ದಾಳಿಯೇ.? ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು..?

ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ. ಆದರೆ ಸೇರ್ಪಡೆಯಾಗುವ ದಿನಾಂಕ ಇದುವರೆಗೆ ನಿಗದಿಯಾಗಿಲ್ಲ.

ಎಚ್ ಡಿಕೆ ತಿರುಗೇಟು: ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಬಾಗಿಲು ತೆರೆದಿದೆ. ಹೋಗುವವರು ಹೋಗಬಹುದು. ದೇವೇಗೌಡರು ಯಾರನ್ನು ಬೆಳೆಸಿದ್ದರೋ ಅವರೇ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಮಧು ಬಂಗಾರಪ್ಪ ಪಕ್ಷ ತೊರೆಯುವುದು ಹಳೇಯ ವಿಚಾರ ಎಂದರು.

Advertisement

ಇದನ್ನೂ ಓದಿ: ಮಾ. 12ರಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ : ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ

Advertisement

Udayavani is now on Telegram. Click here to join our channel and stay updated with the latest news.

Next